Andolana originals

ಓದುಗರ ಪತ್ರ: ಕಮಲ್ ನಾಯಕ, ಕಲಾವಿದ ಆಗಲೇ ಇಲ್ಲ…

ಇತ್ತೀಚೆಗೆ ತಮ್ಮ ಹೊಸ ಸಿನಿಮಾ ಥಗ್ ಲೈಫ್ ಪರ ಪ್ರಚಾರದ ಸಂದರ್ಭದಲ್ಲಿ ಪ್ರಸಿದ್ಧ ನಟ ಕಮಲ್‌ಹಾಸನ್ ಅವರು ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು, ಎಂಬ ಅಸಂಬದ್ಧ ಹೇಳಿಕೆ ನೀಡಿ ಕನ್ನಡ ಜನಮಾನಸವನ್ನು ಕೆಣಕಿದ್ದಾರೆ.

ಮುಂದುವರಿದು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸುವ ಬದಲು,ತಪ್ಪು ಮಾಡುವ ಜಾಯಮಾನ ತನ್ನದಲ್ಲ, ಕ್ಷಮೆ ಕೇಳುವುದಿಲ್ಲ ಎಂದು ಮರು ಹೇಳಿಕೆ ನೀಡಿ ಈಗ ಹೈಕೋರ್ಟ್ ಮೆಟ್ಟಿಲೇರಿದ್ದರು. ಕರ್ನಾಟಕ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರ ಬಿಡುಗಡೆಗೆ ಉಚ್ಚ ನ್ಯಾಯಾಲಯ ಒಂದು ವಾರ ಕಾಲ ತಡೆಯಾಜ್ಞೆ ನೀಡಿದೆ. ಕಮಲ್ ಈ ವರೆಗೂ ತಮ್ಮ ನಟನೆಯಿಂದ ಜನ ಮನ ಗೆದ್ದಿದ್ದಾರೆಯೇ ಹೊರತು ತಮ್ಮ ನಡೆ ನುಡಿಯಿಂದ ಅಲ್ಲ. ನರೇಂದ್ರ ಮೋದಿಯವರ ಕೋಮು ಮತ್ತು ಬಂಡವಾಳ ರಾಜಕಾರಣ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಹತ್ತಿಕ್ಕಲು ಹವಣಿಸುತ್ತಿರುವ ಈ ಹೊತ್ತಿನಲ್ಲಿ ರಾಜ್ಯಸಭೆಗೆ ಹೊರಡಲು ಕಮಲ್ ಸಿದ್ಧವಾಗುತ್ತಿದ್ದಾರೆ. ದಕ್ಷಿಣ ರಾಜ್ಯಗಳ ಧ್ವನಿಯಾಗಲು ವೇದಿಕೆಯತ್ತ ಹೊರಟಿರುವ ಕಮಲ್ ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿ ನಾಯಕನಾಗಿ ಹೊರಹೊಮ್ಮಲಿ. ಇಲ್ಲವಾದರೆ, ಕನ್ನಡಿಗರ ಎದೆಗೆ ವಿಷದ ಸೂಜಿ ಚುಚ್ಚಿದ ಕಹಿ ನೆನಪಾಗಿ ಉಳಿದುಬಿಡುತ್ತಾರೆ. ಹೊಸ ಜವಾಬ್ದಾರಿಯತ್ತ ಹೊರಟಿರುವ ಅವರಿಗೆ ಕನಿಷ್ಠ ರಾಜಕೀಯ ಅರಿವು ಮೂಡಲಿ.

– ಉಗ್ರನರಸಿಂಹೇಗೌಡ, ಸರ್ವೋದಯ ಕರ್ನಾಟಕ, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

30 mins ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

1 hour ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

1 hour ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

2 hours ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

3 hours ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

3 hours ago