ಓದುಗರ ಪತ್ರ
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು ನಟ ಕಮಲ್ ಹಾಸನ್ ಹೇಳಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ ಎನ್ನಬಹುದು. ಕನ್ನಡ, ತಮಿಳು, ತೆಲುಗು ಸೋದರ ಭಾಷೆಗಳು ಎಂಬ ಸಾಮಾನ್ಯ ಅರಿವು ಆ ನಟನಿಗೆ ಇಲ್ಲ. ತಮಿಳು ಭಾಷೆಯಷ್ಟೇ ಪ್ರಾಚೀನ ಇತಿಹಾಸವನ್ನು ಕನ್ನಡ ಭಾಷೆಯೂ ಹೊಂದಿದೆ. ಕನ್ನಡ ಎಂಬ ಹೆಸರಿನ ಹಿಂದೆ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮಾತ್ರವಲ್ಲ ಕನ್ನಡ ನುಡಿ, ಜಲ, ಗಡಿ ಎಲ್ಲವೂ ಅಡಗಿವೆ. ರಾಮಾಯಣ, ಮಹಾಭಾರತ ಮಹಾ ಕಾವ್ಯಗಳಲ್ಲಿ ಈ ನೆಲದ ಪ್ರಸ್ತಾಪವಿದೆ. ರಾಮಾಯಣದಲ್ಲಿ ವೈಜಯಂತ, ರಟ್ಟಿಕಾ, ವಾಲಿ, ಸುಗ್ರೀವ, ಹನುಮಂತ ನೆಲೆಸಿದ್ದ ಹಂಪೆ ಸಮೀಪದ ಕಿಷ್ಕಿಂದೆಯ ಉಲ್ಲೇಖವಿದೆ. ಮಹಾಭಾರತದ ಸಭಾ ಪರ್ವದಲ್ಲಿ ಕರ್ನಾಟ, ಕರ್ಣಟಿಕ ಎಂಬ ಹೆಸರುಗಳು ಕೇಳಿ ಬಂದಿವೆ. ಕ್ರಿ.ಶ. ಒಂದನೇ ಶತಮಾನದಲ್ಲೆ ಇಲ್ಲಿಗೆ ಬಂದಿದ್ದ ವಿದೇಶಿಯರಾದ ಪ್ಲೀನಿ, ಟಾಲಮಿ ಮೊದಲಾದವರು ಕನ್ನಡ ಹೆಸರಿನ ಸ್ಥಳಗಳನ್ನು ತಮ್ಮ ಪ್ರವಾಸಿ ಕೃತಿಗಳಲ್ಲಿ ಪ್ರಸ್ತಾಪ ಮಾಡಿರುವುದು ತಿಳಿದು ಬಂದಿದೆ. ದಕ್ಷಿಣ ಭಾರತದಲ್ಲೇ ತಮಿಳಿಗಿಂತ ಮೊದಲು ತನ್ನದೇ ಆದ ಲಿಪಿ ಹೊಂದಿದ ಖ್ಯಾತಿ ಕನ್ನಡಕ್ಕೆ ಇದೆ. ಕನ್ನಡ ಲಿಪಿಯನ್ನು ನೋಡಿದ ವಿನೋಬ ಭಾವೆ ಅವರು ಇದನ್ನು‘ಲಿಪಿಗಳ ರಾಣಿ ’ಎಂದು ಬಣ್ಣಿಸಿದ್ದಾರೆ. ಒಂದು ಭಾಷೆ ಲಿಪಿ ಪಡೆಯಲು ನೂರಾರು, ಸಾವಿರಾರು ವರ್ಷಗಳೇ ಬೇಕು ಎಂದ ಮೇಲೆ ಕನ್ನಡ ಭಾಷೆಯ ಉಗಮ ಸಾವಿರಾರು ವರ್ಷಗಳ ಹಿಂದೆಯೇ ಆಗಿದೆ. ಇದನ್ನು ಅರಿಯದೆ ಕಮಲ್ ಹಾಸನ್ ಅವರು ಕನ್ನಡ ಭಾಷೆಯನ್ನು ಅವಮಾನಿಸಿರುವುದು ಖಂಡನೀಯ.
– ಸಿ. ಸಿದ್ದರಾಜು ಆಲಕೆರೆ, ಮಂಡ್ಯ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…