Andolana originals

ಓದುಗರ ಪತ್ರ: ಕಮಲ್ ಹಾಸನ್ ಹೇಳಿಕೆ ಖಂಡನೀಯ

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು ನಟ ಕಮಲ್ ಹಾಸನ್ ಹೇಳಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ ಎನ್ನಬಹುದು. ಕನ್ನಡ, ತಮಿಳು, ತೆಲುಗು ಸೋದರ ಭಾಷೆಗಳು ಎಂಬ ಸಾಮಾನ್ಯ ಅರಿವು ಆ ನಟನಿಗೆ ಇಲ್ಲ. ತಮಿಳು ಭಾಷೆಯಷ್ಟೇ ಪ್ರಾಚೀನ ಇತಿಹಾಸವನ್ನು ಕನ್ನಡ ಭಾಷೆಯೂ ಹೊಂದಿದೆ. ಕನ್ನಡ ಎಂಬ ಹೆಸರಿನ ಹಿಂದೆ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮಾತ್ರವಲ್ಲ ಕನ್ನಡ ನುಡಿ, ಜಲ, ಗಡಿ ಎಲ್ಲವೂ ಅಡಗಿವೆ. ರಾಮಾಯಣ, ಮಹಾಭಾರತ ಮಹಾ ಕಾವ್ಯಗಳಲ್ಲಿ ಈ ನೆಲದ ಪ್ರಸ್ತಾಪವಿದೆ. ರಾಮಾಯಣದಲ್ಲಿ ವೈಜಯಂತ, ರಟ್ಟಿಕಾ, ವಾಲಿ, ಸುಗ್ರೀವ, ಹನುಮಂತ ನೆಲೆಸಿದ್ದ ಹಂಪೆ ಸಮೀಪದ ಕಿಷ್ಕಿಂದೆಯ ಉಲ್ಲೇಖವಿದೆ. ಮಹಾಭಾರತದ ಸಭಾ ಪರ್ವದಲ್ಲಿ ಕರ್ನಾಟ, ಕರ್ಣಟಿಕ ಎಂಬ ಹೆಸರುಗಳು ಕೇಳಿ ಬಂದಿವೆ. ಕ್ರಿ.ಶ. ಒಂದನೇ ಶತಮಾನದಲ್ಲೆ ಇಲ್ಲಿಗೆ ಬಂದಿದ್ದ ವಿದೇಶಿಯರಾದ ಪ್ಲೀನಿ, ಟಾಲಮಿ ಮೊದಲಾದವರು ಕನ್ನಡ ಹೆಸರಿನ ಸ್ಥಳಗಳನ್ನು ತಮ್ಮ ಪ್ರವಾಸಿ ಕೃತಿಗಳಲ್ಲಿ ಪ್ರಸ್ತಾಪ ಮಾಡಿರುವುದು ತಿಳಿದು ಬಂದಿದೆ. ದಕ್ಷಿಣ ಭಾರತದಲ್ಲೇ ತಮಿಳಿಗಿಂತ ಮೊದಲು ತನ್ನದೇ ಆದ ಲಿಪಿ ಹೊಂದಿದ ಖ್ಯಾತಿ ಕನ್ನಡಕ್ಕೆ ಇದೆ. ಕನ್ನಡ ಲಿಪಿಯನ್ನು ನೋಡಿದ ವಿನೋಬ ಭಾವೆ ಅವರು ಇದನ್ನು‘ಲಿಪಿಗಳ ರಾಣಿ ’ಎಂದು ಬಣ್ಣಿಸಿದ್ದಾರೆ. ಒಂದು ಭಾಷೆ ಲಿಪಿ ಪಡೆಯಲು ನೂರಾರು, ಸಾವಿರಾರು ವರ್ಷಗಳೇ ಬೇಕು ಎಂದ ಮೇಲೆ ಕನ್ನಡ ಭಾಷೆಯ ಉಗಮ ಸಾವಿರಾರು ವರ್ಷಗಳ ಹಿಂದೆಯೇ ಆಗಿದೆ. ಇದನ್ನು ಅರಿಯದೆ ಕಮಲ್ ಹಾಸನ್ ಅವರು ಕನ್ನಡ ಭಾಷೆಯನ್ನು ಅವಮಾನಿಸಿರುವುದು ಖಂಡನೀಯ.

– ಸಿ. ಸಿದ್ದರಾಜು ಆಲಕೆರೆ, ಮಂಡ್ಯ.

ಆಂದೋಲನ ಡೆಸ್ಕ್

Recent Posts

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

1 hour ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

2 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

2 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

2 hours ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

3 hours ago