Andolana originals

ಓದುಗರ ಪತ್ರ: ಕಮಲ್ ಹಾಸನ್ ಹೇಳಿಕೆ ಖಂಡನೀಯ

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು ನಟ ಕಮಲ್ ಹಾಸನ್ ಹೇಳಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ ಎನ್ನಬಹುದು. ಕನ್ನಡ, ತಮಿಳು, ತೆಲುಗು ಸೋದರ ಭಾಷೆಗಳು ಎಂಬ ಸಾಮಾನ್ಯ ಅರಿವು ಆ ನಟನಿಗೆ ಇಲ್ಲ. ತಮಿಳು ಭಾಷೆಯಷ್ಟೇ ಪ್ರಾಚೀನ ಇತಿಹಾಸವನ್ನು ಕನ್ನಡ ಭಾಷೆಯೂ ಹೊಂದಿದೆ. ಕನ್ನಡ ಎಂಬ ಹೆಸರಿನ ಹಿಂದೆ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮಾತ್ರವಲ್ಲ ಕನ್ನಡ ನುಡಿ, ಜಲ, ಗಡಿ ಎಲ್ಲವೂ ಅಡಗಿವೆ. ರಾಮಾಯಣ, ಮಹಾಭಾರತ ಮಹಾ ಕಾವ್ಯಗಳಲ್ಲಿ ಈ ನೆಲದ ಪ್ರಸ್ತಾಪವಿದೆ. ರಾಮಾಯಣದಲ್ಲಿ ವೈಜಯಂತ, ರಟ್ಟಿಕಾ, ವಾಲಿ, ಸುಗ್ರೀವ, ಹನುಮಂತ ನೆಲೆಸಿದ್ದ ಹಂಪೆ ಸಮೀಪದ ಕಿಷ್ಕಿಂದೆಯ ಉಲ್ಲೇಖವಿದೆ. ಮಹಾಭಾರತದ ಸಭಾ ಪರ್ವದಲ್ಲಿ ಕರ್ನಾಟ, ಕರ್ಣಟಿಕ ಎಂಬ ಹೆಸರುಗಳು ಕೇಳಿ ಬಂದಿವೆ. ಕ್ರಿ.ಶ. ಒಂದನೇ ಶತಮಾನದಲ್ಲೆ ಇಲ್ಲಿಗೆ ಬಂದಿದ್ದ ವಿದೇಶಿಯರಾದ ಪ್ಲೀನಿ, ಟಾಲಮಿ ಮೊದಲಾದವರು ಕನ್ನಡ ಹೆಸರಿನ ಸ್ಥಳಗಳನ್ನು ತಮ್ಮ ಪ್ರವಾಸಿ ಕೃತಿಗಳಲ್ಲಿ ಪ್ರಸ್ತಾಪ ಮಾಡಿರುವುದು ತಿಳಿದು ಬಂದಿದೆ. ದಕ್ಷಿಣ ಭಾರತದಲ್ಲೇ ತಮಿಳಿಗಿಂತ ಮೊದಲು ತನ್ನದೇ ಆದ ಲಿಪಿ ಹೊಂದಿದ ಖ್ಯಾತಿ ಕನ್ನಡಕ್ಕೆ ಇದೆ. ಕನ್ನಡ ಲಿಪಿಯನ್ನು ನೋಡಿದ ವಿನೋಬ ಭಾವೆ ಅವರು ಇದನ್ನು‘ಲಿಪಿಗಳ ರಾಣಿ ’ಎಂದು ಬಣ್ಣಿಸಿದ್ದಾರೆ. ಒಂದು ಭಾಷೆ ಲಿಪಿ ಪಡೆಯಲು ನೂರಾರು, ಸಾವಿರಾರು ವರ್ಷಗಳೇ ಬೇಕು ಎಂದ ಮೇಲೆ ಕನ್ನಡ ಭಾಷೆಯ ಉಗಮ ಸಾವಿರಾರು ವರ್ಷಗಳ ಹಿಂದೆಯೇ ಆಗಿದೆ. ಇದನ್ನು ಅರಿಯದೆ ಕಮಲ್ ಹಾಸನ್ ಅವರು ಕನ್ನಡ ಭಾಷೆಯನ್ನು ಅವಮಾನಿಸಿರುವುದು ಖಂಡನೀಯ.

– ಸಿ. ಸಿದ್ದರಾಜು ಆಲಕೆರೆ, ಮಂಡ್ಯ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

44 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

1 hour ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago