Mysore
20
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಓದುಗರ ಪತ್ರ: ಹೆದ್ದಾರಿ ಪಕ್ಕದಲ್ಲಿ ಕನ್ನಡ ಭವನ ನಿರ್ಮಾಣವಾಗಲಿ

ಓದುಗರ ಪತ್ರ

ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.

ಕನ್ನಡ ಭವನಕ್ಕೆ ಸೂಕ್ತವಾದ ಸ್ಥಳ ಎಂದರೆ ಹೆದ್ದಾರಿ ಪಕ್ಕದಲ್ಲಿ ಇರುವ ಜ್ಯೂಬಿಲಿ ಪಾರ್ಕ್. ಈ ಜ್ಯೂಬಿಲಿ ಪಾರ್ಕ್‌ನ್ನು ಮಂಡ್ಯ ಪುರಸಭೆ ಅಸ್ತಿತ್ವಕ್ಕೆ ಬಂದ ೨೫ನೇ ವಾರ್ಷಿಕೋತ್ಸವದ ನೆನಪಿಗೆ ೧೯೩೫ರಲ್ಲಿ ನಿರ್ಮಿಸಲಾಯಿತು. ಆದರೆ, ಇಂದು ನಗರಸಭೆಯವರ ನಿರ್ಲಕ್ಷ ಕ್ಕೆ ಒಳಗಾಗಿದೆ. ನಗರ ಸಭೆ ಹಿಂದೊಮ್ಮೆ ಅಲ್ಲಿ ಭವನ ನಿರ್ಮಿಸಲು ಉದ್ದೇಶ ಹೊಂದಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಿಂದೊಮ್ಮೆ ಈ ಪಾರ್ಕ್ ಚಳವಳಿಯ ಕೇಂದ್ರವಾಗಿತ್ತು.

ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. ವರುಣ ನಾಲೆಯ ಚಳವಳಿ, ಕಾವೇರಿ ಚಳವಳಿ ಮುಂತಾದ ಚಟುವಟಿಕೆಗಳಿಗೆ ಕೇಂದ್ರ ಸ್ಥಾನವಾಗಿತ್ತು. ಆದರೀಗ ಅದು ತುಂಬಾ ನಿರ್ಲಕ್ಷ ಕ್ಕೆ ಒಳಗಾಗಿದೆ. ಈ ಸ್ಥಳದಲ್ಲಿ ‘ಕನ್ನಡ ಭವನ ‘ನಿರ್ಮಿಸಿ ಅಲ್ಲಿ ಕನ್ನಡ ಪುಸ್ತಕಗಳ ಬಿಡುಗಡೆ, ಕನ್ನಡದ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮಗಳು, ಸಣ್ಣ ಪುಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಾ ನಡೆಯುವಂತೆ ಮಾಡಬೇಕು. ಈ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಶಾಸಕ ರವಿಕುಮಾರ್ ಗಣಿಗ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.

– ಸಿ. ಸಿದ್ದರಾಜು ಆಲಕೆರೆ, ಮಂಡ್ಯ

Tags:
error: Content is protected !!