Andolana originals

ಓದುಗರ ಪತ್ರ: ಹೆದ್ದಾರಿ ಪಕ್ಕದಲ್ಲಿ ಕನ್ನಡ ಭವನ ನಿರ್ಮಾಣವಾಗಲಿ

ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.

ಕನ್ನಡ ಭವನಕ್ಕೆ ಸೂಕ್ತವಾದ ಸ್ಥಳ ಎಂದರೆ ಹೆದ್ದಾರಿ ಪಕ್ಕದಲ್ಲಿ ಇರುವ ಜ್ಯೂಬಿಲಿ ಪಾರ್ಕ್. ಈ ಜ್ಯೂಬಿಲಿ ಪಾರ್ಕ್‌ನ್ನು ಮಂಡ್ಯ ಪುರಸಭೆ ಅಸ್ತಿತ್ವಕ್ಕೆ ಬಂದ ೨೫ನೇ ವಾರ್ಷಿಕೋತ್ಸವದ ನೆನಪಿಗೆ ೧೯೩೫ರಲ್ಲಿ ನಿರ್ಮಿಸಲಾಯಿತು. ಆದರೆ, ಇಂದು ನಗರಸಭೆಯವರ ನಿರ್ಲಕ್ಷ ಕ್ಕೆ ಒಳಗಾಗಿದೆ. ನಗರ ಸಭೆ ಹಿಂದೊಮ್ಮೆ ಅಲ್ಲಿ ಭವನ ನಿರ್ಮಿಸಲು ಉದ್ದೇಶ ಹೊಂದಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಿಂದೊಮ್ಮೆ ಈ ಪಾರ್ಕ್ ಚಳವಳಿಯ ಕೇಂದ್ರವಾಗಿತ್ತು.

ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. ವರುಣ ನಾಲೆಯ ಚಳವಳಿ, ಕಾವೇರಿ ಚಳವಳಿ ಮುಂತಾದ ಚಟುವಟಿಕೆಗಳಿಗೆ ಕೇಂದ್ರ ಸ್ಥಾನವಾಗಿತ್ತು. ಆದರೀಗ ಅದು ತುಂಬಾ ನಿರ್ಲಕ್ಷ ಕ್ಕೆ ಒಳಗಾಗಿದೆ. ಈ ಸ್ಥಳದಲ್ಲಿ ‘ಕನ್ನಡ ಭವನ ‘ನಿರ್ಮಿಸಿ ಅಲ್ಲಿ ಕನ್ನಡ ಪುಸ್ತಕಗಳ ಬಿಡುಗಡೆ, ಕನ್ನಡದ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮಗಳು, ಸಣ್ಣ ಪುಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಾ ನಡೆಯುವಂತೆ ಮಾಡಬೇಕು. ಈ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಶಾಸಕ ರವಿಕುಮಾರ್ ಗಣಿಗ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.

– ಸಿ. ಸಿದ್ದರಾಜು ಆಲಕೆರೆ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

16 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

49 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago