ಓದುಗರ ಪತ್ರ
ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.
ಕನ್ನಡ ಭವನಕ್ಕೆ ಸೂಕ್ತವಾದ ಸ್ಥಳ ಎಂದರೆ ಹೆದ್ದಾರಿ ಪಕ್ಕದಲ್ಲಿ ಇರುವ ಜ್ಯೂಬಿಲಿ ಪಾರ್ಕ್. ಈ ಜ್ಯೂಬಿಲಿ ಪಾರ್ಕ್ನ್ನು ಮಂಡ್ಯ ಪುರಸಭೆ ಅಸ್ತಿತ್ವಕ್ಕೆ ಬಂದ ೨೫ನೇ ವಾರ್ಷಿಕೋತ್ಸವದ ನೆನಪಿಗೆ ೧೯೩೫ರಲ್ಲಿ ನಿರ್ಮಿಸಲಾಯಿತು. ಆದರೆ, ಇಂದು ನಗರಸಭೆಯವರ ನಿರ್ಲಕ್ಷ ಕ್ಕೆ ಒಳಗಾಗಿದೆ. ನಗರ ಸಭೆ ಹಿಂದೊಮ್ಮೆ ಅಲ್ಲಿ ಭವನ ನಿರ್ಮಿಸಲು ಉದ್ದೇಶ ಹೊಂದಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಿಂದೊಮ್ಮೆ ಈ ಪಾರ್ಕ್ ಚಳವಳಿಯ ಕೇಂದ್ರವಾಗಿತ್ತು.
ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. ವರುಣ ನಾಲೆಯ ಚಳವಳಿ, ಕಾವೇರಿ ಚಳವಳಿ ಮುಂತಾದ ಚಟುವಟಿಕೆಗಳಿಗೆ ಕೇಂದ್ರ ಸ್ಥಾನವಾಗಿತ್ತು. ಆದರೀಗ ಅದು ತುಂಬಾ ನಿರ್ಲಕ್ಷ ಕ್ಕೆ ಒಳಗಾಗಿದೆ. ಈ ಸ್ಥಳದಲ್ಲಿ ‘ಕನ್ನಡ ಭವನ ‘ನಿರ್ಮಿಸಿ ಅಲ್ಲಿ ಕನ್ನಡ ಪುಸ್ತಕಗಳ ಬಿಡುಗಡೆ, ಕನ್ನಡದ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮಗಳು, ಸಣ್ಣ ಪುಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಾ ನಡೆಯುವಂತೆ ಮಾಡಬೇಕು. ಈ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಶಾಸಕ ರವಿಕುಮಾರ್ ಗಣಿಗ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.
– ಸಿ. ಸಿದ್ದರಾಜು ಆಲಕೆರೆ, ಮಂಡ್ಯ
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…