Andolana originals

ಓದುಗರ ಪತ್ರ: ಗಡಿಭಾಗದ ಶಾಲೆಗಳಲ್ಲಿ ಕನ್ನಡ ನಿರ್ಲಕ್ಷ್ಯ ಸಲ್ಲದು

ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ ಸುವ ಸರ್ಕಾರದ ನಿರ್ಧಾರವು ಕೇವಲ ಆದೇಶಕ್ಕೆ ಮಾತ್ರ ಸೀಮಿತವಾಗಿರುವುದು ವಿಷಾದ ಕರ ಸಂಗತಿಯಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದರೂ, ಗಡಿ ಜಿಲ್ಲೆಗಳಲ್ಲಿ ನಮ್ಮ ಭಾಷೆಯು ಪರಕೀಯರಂತೆ ಅನಾಥವಾಗಿರುವುದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿ.

ನೆರೆಯ ರಾಜ್ಯಗಳು ತಮ್ಮ ಭಾಷೆಯ ರಕ್ಷಣೆಗಾಗಿ ಉಗ್ರವಾದ ನಿಲುವು ತಳೆಯುತ್ತಿರುವಾಗ, ನಮ್ಮ ಸರ್ಕಾರವು ‘ಸಮಿತಿ’, ‘ಚರ್ಚೆ’ ಎಂಬ ನೆಪವೊಡ್ಡಿ ಕಾಲಹರಣ ಮಾಡುತ್ತಿರುವುದು ಕನ್ನಡ ವಿರೋಧಿ ಧೋರಣೆಯಲ್ಲದೆ ಮತ್ತೇನು? ಕನ್ನಡದ ಅನ್ನ ಉಣ್ಣುತ್ತಾ, ಇಲ್ಲಿನ ಸವಲತ್ತು ಪಡೆಯುವ ಯಾವುದೇ ಶಿಕ್ಷಣ ಸಂಸ್ಥೆಯು ಕನ್ನಡವನ್ನು ಮೊದಲ ಭಾಷೆ ಯಾಗಿ ಕಲಿಸಲು ಹಿಂಜರಿಯುವುದು ಅಕ್ಷಮ್ಯ ಅಪರಾಧ.

ಸರ್ಕಾರಕ್ಕೆ ನಿಜವಾಗಿಯೂ ಭಾಷಾಭಿಮಾನವಿದ್ದರೆ ತಕ್ಷಣವೇ ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಕನ್ನಡ ಕಲಿಸದ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬೇಕು. ಗಡಿಭಾಗದ ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಟ್ಟು, ಅನ್ಯಭಾಷಿಕರ ತುಷ್ಟೀಕರಣ ಮಾಡುವುದನ್ನು ಸರ್ಕಾರ ನಿಲ್ಲಿಸಲಿ.

– ಡಾ. ಎಚ್.ಕೆ.ವಿಜಯಕುಮಾರ್ ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

5 mins ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

33 mins ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

1 hour ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

2 hours ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

4 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

5 hours ago