Andolana originals

ಓದುಗರ ಪತ್ರ: ಗಡಿಭಾಗದ ಶಾಲೆಗಳಲ್ಲಿ ಕನ್ನಡ ನಿರ್ಲಕ್ಷ್ಯ ಸಲ್ಲದು

ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ ಸುವ ಸರ್ಕಾರದ ನಿರ್ಧಾರವು ಕೇವಲ ಆದೇಶಕ್ಕೆ ಮಾತ್ರ ಸೀಮಿತವಾಗಿರುವುದು ವಿಷಾದ ಕರ ಸಂಗತಿಯಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದರೂ, ಗಡಿ ಜಿಲ್ಲೆಗಳಲ್ಲಿ ನಮ್ಮ ಭಾಷೆಯು ಪರಕೀಯರಂತೆ ಅನಾಥವಾಗಿರುವುದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿ.

ನೆರೆಯ ರಾಜ್ಯಗಳು ತಮ್ಮ ಭಾಷೆಯ ರಕ್ಷಣೆಗಾಗಿ ಉಗ್ರವಾದ ನಿಲುವು ತಳೆಯುತ್ತಿರುವಾಗ, ನಮ್ಮ ಸರ್ಕಾರವು ‘ಸಮಿತಿ’, ‘ಚರ್ಚೆ’ ಎಂಬ ನೆಪವೊಡ್ಡಿ ಕಾಲಹರಣ ಮಾಡುತ್ತಿರುವುದು ಕನ್ನಡ ವಿರೋಧಿ ಧೋರಣೆಯಲ್ಲದೆ ಮತ್ತೇನು? ಕನ್ನಡದ ಅನ್ನ ಉಣ್ಣುತ್ತಾ, ಇಲ್ಲಿನ ಸವಲತ್ತು ಪಡೆಯುವ ಯಾವುದೇ ಶಿಕ್ಷಣ ಸಂಸ್ಥೆಯು ಕನ್ನಡವನ್ನು ಮೊದಲ ಭಾಷೆ ಯಾಗಿ ಕಲಿಸಲು ಹಿಂಜರಿಯುವುದು ಅಕ್ಷಮ್ಯ ಅಪರಾಧ.

ಸರ್ಕಾರಕ್ಕೆ ನಿಜವಾಗಿಯೂ ಭಾಷಾಭಿಮಾನವಿದ್ದರೆ ತಕ್ಷಣವೇ ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಕನ್ನಡ ಕಲಿಸದ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬೇಕು. ಗಡಿಭಾಗದ ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಟ್ಟು, ಅನ್ಯಭಾಷಿಕರ ತುಷ್ಟೀಕರಣ ಮಾಡುವುದನ್ನು ಸರ್ಕಾರ ನಿಲ್ಲಿಸಲಿ.

– ಡಾ. ಎಚ್.ಕೆ.ವಿಜಯಕುಮಾರ್ ಬೆಂಗಳೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

5 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

5 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

6 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

8 hours ago