Mysore
21
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

dgp murder case

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ ಅಂತಸ್ತಿನಲ್ಲಿದೆ. ವಯಸ್ಸಾದವರು, ಅಂಗವಿಕಲರು ಹಾಗೂ ಅನಾರೋಗ್ಯದಿಂದ ಬಳಲುವವರು ಎರಡನೇ ಮಹಡಿಯಲ್ಲಿರುವ ಬ್ಯಾಂಕಿನ ಶಾಖೆಗೆ ತೆರಳಿ ವಹಿವಾಟು ನಡೆಸಲು ತೊಂದರೆಯಾಗುತ್ತಿದೆ. ಶೌಚಾಲಯದ ಸಮಸ್ಯೆ ಕೂಡ ಇದೆ. ಬ್ಯಾಂಕಿನ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬ್ಯಾಂಕ್ ಶಾಖೆಯನ್ನು ನೆಲಮಟ್ಟದಲ್ಲಿರುವ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯವಿರುವ ಕಟ್ಟಡಕ್ಕೆ ಸ್ಥಳಾಂತರಿಸುವ ಮೂಲಕ ಬ್ಯಾಂಕ್ ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾ.

Tags:
error: Content is protected !!