Andolana originals

ಓದುಗರ ಪತ್ರ: ಕರ್ನಾಟಕವೂ ಡಿಜಿಟಲ್ ಕೃಷಿ ಮಿಷನ್‌ನ ಭಾಗವಾಗಲಿ

ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.

ಕರ್ನಾಟಕದಲ್ಲಿ ಈ ಯೋಜನೆಯ ಸುಳಿವೇ ಇಲ್ಲ. ಕರ್ನಾಟಕವು ಅಕ್ಕಿ, ಸಕ್ಕರೆ, ಕಬ್ಬು, ಕಾಫಿ, ರಾಗಿ, ಹಣ್ಣುಗಳು ಹಾಗೂ ತರಕಾರಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕದ ಕೃಷಿ ವೈವಿಧ್ಯತೆ ಮತ್ತು ತಂತ್ರಜ್ಞಾನ ಬಳಕೆಯು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ಡಿಜಿಟಲ್ ಕೃಷಿ ಮಿಷನ್ ರಾಜ್ಯದಲ್ಲಿ ಜಾರಿಯಲ್ಲಿ ಇಲ್ಲದಿರುವುದು ರೈತ ಸಮುದಾಯದಲ್ಲಿ ನಿರಾಶೆಯನ್ನು ಉಂಟುಮಾಡಿದೆ.

ರಾಜ್ಯವೂ ಡಿಜಿಟಲ್ ಕೃಷಿ ಮಿಷನ್ ನ ಭಾಗವಾದರೆ ರೈತರಿಗೆ ಮಣ್ಣಿನ ಗುಣಮಟ್ಟದ ನಕ್ಷೆ, ಬೆಳೆ ಸಲಹೆಗಳು, ಹವಾಮಾನ ಮಾಹಿತಿ, ಹಾಗೂ ಬೆಳೆ ಉತ್ಪಾದನಾ ಅಂದಾಜುಗಳಂತಹ ಆಧುನಿಕ ಸೌಲಭ್ಯಗಳು ದೊರೆಯುತ್ತದೆ. ಕೇಂದ್ರ ಸರ್ಕಾರವು ಈ ವಿಷಯವನ್ನು ತಕ್ಷಣ ಪರಿಗಣಿಸಿ ಕರ್ನಾಟಕವನ್ನೂ ಮಿಷನ್‌ನಲ್ಲಿ ಸೇರಿಸಬೇಕು. ಡಿಜಿಟಲ್ ಕೃಷಿ ಮಿಷನ್ ನಿಂದ ರೈತರ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ. ಕರ್ನಾಟಕದ ಒಳಗೊಳ್ಳುವಿಕೆಯು ರಾಷ್ಟ್ರದ ಕೃಷಿ ಡಿಜಿಟಲೀಕರಣದ ಪ್ರಯತ್ನಕ್ಕೆ ನಿಜವಾದ ಶಕ್ತಿ ನೀಡುತ್ತದೆ.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago