ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.
ಕರ್ನಾಟಕದಲ್ಲಿ ಈ ಯೋಜನೆಯ ಸುಳಿವೇ ಇಲ್ಲ. ಕರ್ನಾಟಕವು ಅಕ್ಕಿ, ಸಕ್ಕರೆ, ಕಬ್ಬು, ಕಾಫಿ, ರಾಗಿ, ಹಣ್ಣುಗಳು ಹಾಗೂ ತರಕಾರಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕದ ಕೃಷಿ ವೈವಿಧ್ಯತೆ ಮತ್ತು ತಂತ್ರಜ್ಞಾನ ಬಳಕೆಯು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ಡಿಜಿಟಲ್ ಕೃಷಿ ಮಿಷನ್ ರಾಜ್ಯದಲ್ಲಿ ಜಾರಿಯಲ್ಲಿ ಇಲ್ಲದಿರುವುದು ರೈತ ಸಮುದಾಯದಲ್ಲಿ ನಿರಾಶೆಯನ್ನು ಉಂಟುಮಾಡಿದೆ.
ರಾಜ್ಯವೂ ಡಿಜಿಟಲ್ ಕೃಷಿ ಮಿಷನ್ ನ ಭಾಗವಾದರೆ ರೈತರಿಗೆ ಮಣ್ಣಿನ ಗುಣಮಟ್ಟದ ನಕ್ಷೆ, ಬೆಳೆ ಸಲಹೆಗಳು, ಹವಾಮಾನ ಮಾಹಿತಿ, ಹಾಗೂ ಬೆಳೆ ಉತ್ಪಾದನಾ ಅಂದಾಜುಗಳಂತಹ ಆಧುನಿಕ ಸೌಲಭ್ಯಗಳು ದೊರೆಯುತ್ತದೆ. ಕೇಂದ್ರ ಸರ್ಕಾರವು ಈ ವಿಷಯವನ್ನು ತಕ್ಷಣ ಪರಿಗಣಿಸಿ ಕರ್ನಾಟಕವನ್ನೂ ಮಿಷನ್ನಲ್ಲಿ ಸೇರಿಸಬೇಕು. ಡಿಜಿಟಲ್ ಕೃಷಿ ಮಿಷನ್ ನಿಂದ ರೈತರ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ. ಕರ್ನಾಟಕದ ಒಳಗೊಳ್ಳುವಿಕೆಯು ರಾಷ್ಟ್ರದ ಕೃಷಿ ಡಿಜಿಟಲೀಕರಣದ ಪ್ರಯತ್ನಕ್ಕೆ ನಿಜವಾದ ಶಕ್ತಿ ನೀಡುತ್ತದೆ.
– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…