ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.
ಕರ್ನಾಟಕದಲ್ಲಿ ಈ ಯೋಜನೆಯ ಸುಳಿವೇ ಇಲ್ಲ. ಕರ್ನಾಟಕವು ಅಕ್ಕಿ, ಸಕ್ಕರೆ, ಕಬ್ಬು, ಕಾಫಿ, ರಾಗಿ, ಹಣ್ಣುಗಳು ಹಾಗೂ ತರಕಾರಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕದ ಕೃಷಿ ವೈವಿಧ್ಯತೆ ಮತ್ತು ತಂತ್ರಜ್ಞಾನ ಬಳಕೆಯು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ಡಿಜಿಟಲ್ ಕೃಷಿ ಮಿಷನ್ ರಾಜ್ಯದಲ್ಲಿ ಜಾರಿಯಲ್ಲಿ ಇಲ್ಲದಿರುವುದು ರೈತ ಸಮುದಾಯದಲ್ಲಿ ನಿರಾಶೆಯನ್ನು ಉಂಟುಮಾಡಿದೆ.
ರಾಜ್ಯವೂ ಡಿಜಿಟಲ್ ಕೃಷಿ ಮಿಷನ್ ನ ಭಾಗವಾದರೆ ರೈತರಿಗೆ ಮಣ್ಣಿನ ಗುಣಮಟ್ಟದ ನಕ್ಷೆ, ಬೆಳೆ ಸಲಹೆಗಳು, ಹವಾಮಾನ ಮಾಹಿತಿ, ಹಾಗೂ ಬೆಳೆ ಉತ್ಪಾದನಾ ಅಂದಾಜುಗಳಂತಹ ಆಧುನಿಕ ಸೌಲಭ್ಯಗಳು ದೊರೆಯುತ್ತದೆ. ಕೇಂದ್ರ ಸರ್ಕಾರವು ಈ ವಿಷಯವನ್ನು ತಕ್ಷಣ ಪರಿಗಣಿಸಿ ಕರ್ನಾಟಕವನ್ನೂ ಮಿಷನ್ನಲ್ಲಿ ಸೇರಿಸಬೇಕು. ಡಿಜಿಟಲ್ ಕೃಷಿ ಮಿಷನ್ ನಿಂದ ರೈತರ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ. ಕರ್ನಾಟಕದ ಒಳಗೊಳ್ಳುವಿಕೆಯು ರಾಷ್ಟ್ರದ ಕೃಷಿ ಡಿಜಿಟಲೀಕರಣದ ಪ್ರಯತ್ನಕ್ಕೆ ನಿಜವಾದ ಶಕ್ತಿ ನೀಡುತ್ತದೆ.
– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…