Andolana originals

ಓದುಗರ ಪತ್ರ: ಕರೂರು ದುರಂತ; ರಾಜಕಾರಣಿಗಳಿಗೆ ಪಾಠವಾಗಲಿ

ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರು ಹಮಿಕೊಂಡಿದ್ದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದೇಶದ ಜನತೆಯನ್ನು ಆಘಾತಕ್ಕೀಡುಮಾಡಿದೆ. ಇದು ಕೇವಲ ಒಂದು ದುಃಖಕರ ಘಟನೆ ಮಾತ್ರವಲ್ಲ ಜನಸಮೂಹ ನಿರ್ವಹಣೆಯಲ್ಲಿ ಕಂಡುಬಂದ ಗಂಭೀರ ಲೋಪವಾಗಿದೆ. ಈ ಸಮಾವೇಶವನ್ನು ನಿರ್ವಹಿಸಬೇಕಿತ್ತು ಅಷ್ಟೇ ಹೊಣೆಗಾರಿಕೆಯಿಂದ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಬೇಕಿತ್ತು. ದೊಡ್ಡ ಜನಸಮೂಹವು ಕೇವಲ ಸಂಖ್ಯೆಗಳಲ್ಲ, ಅದು ಜೀವಗಳು, ಕುಟುಂಬಗಳು ಮತ್ತು ಭವಿಷ್ಯದ ಸಂಕೇತ. ಅದನ್ನು ಸಮರ್ಪಕವಾಗಿ ಕಾಯುವುದು ಕಾರ್ಯಕ್ರಮ ಆಯೋಜಕರು ಹಾಗೂ ಆಡಳಿತದ ಕರ್ತವ್ಯ.

ಈ ದುರ್ಘಟನೆಯಲ್ಲಿ ಮಕ್ಕಳೂ ಬಲಿಯಾದದ್ದು ಹೃದಯವಿದ್ರಾವಕ. “ಜನರನ್ನು ಸೆಳೆಯುವುದು ಸುಲಭ, ಆದರೆ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ನಿಜವಾದ ನಾಯಕತ್ವ” ಎಂಬ ಮಾತು ಎಲ್ಲ ನಾಯಕರಿಗೂ ಮಾರ್ಗದರ್ಶಿಯಾಗಬೇಕು. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಕಟ್ಟುನಿಟ್ಟಾದ ಜನಸಮೂಹ ನಿಯಂತ್ರಣ, ಮುನ್ನೆಚ್ಚರಿಕಾ ಕ್ರಮಗಳು ಮತ್ತು ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಖಚಿತಪಡಿಸಬೇಕು. ಸುರಕ್ಷತಾ ಮಾರ್ಗಸೂಚಿಗಳ ಆಧಾರದ ಮೇಲೆ ಕಾರ್ಯಕ್ರಮಗಳು ನಡೆಯುವಂತಾಗಬೇಕು. ಕರೂರು ದುರಂತವು ಇನ್ನು ಮುಂದೆ ದೇಶದಲ್ಲಿ ನಡೆಯುವ ರಾಜಕೀಯ ಸಮಾವೇಶಗಳಿಗೆ ಎಚ್ಚರಿಕೆಯ ಪಾಠವಾಗಲಿ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

14 mins ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

20 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

26 mins ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

33 mins ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

3 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

3 hours ago