ಓದುಗರ ಪತ್ರ
ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರು ಹಮಿಕೊಂಡಿದ್ದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದೇಶದ ಜನತೆಯನ್ನು ಆಘಾತಕ್ಕೀಡುಮಾಡಿದೆ. ಇದು ಕೇವಲ ಒಂದು ದುಃಖಕರ ಘಟನೆ ಮಾತ್ರವಲ್ಲ ಜನಸಮೂಹ ನಿರ್ವಹಣೆಯಲ್ಲಿ ಕಂಡುಬಂದ ಗಂಭೀರ ಲೋಪವಾಗಿದೆ. ಈ ಸಮಾವೇಶವನ್ನು ನಿರ್ವಹಿಸಬೇಕಿತ್ತು ಅಷ್ಟೇ ಹೊಣೆಗಾರಿಕೆಯಿಂದ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಬೇಕಿತ್ತು. ದೊಡ್ಡ ಜನಸಮೂಹವು ಕೇವಲ ಸಂಖ್ಯೆಗಳಲ್ಲ, ಅದು ಜೀವಗಳು, ಕುಟುಂಬಗಳು ಮತ್ತು ಭವಿಷ್ಯದ ಸಂಕೇತ. ಅದನ್ನು ಸಮರ್ಪಕವಾಗಿ ಕಾಯುವುದು ಕಾರ್ಯಕ್ರಮ ಆಯೋಜಕರು ಹಾಗೂ ಆಡಳಿತದ ಕರ್ತವ್ಯ.
ಈ ದುರ್ಘಟನೆಯಲ್ಲಿ ಮಕ್ಕಳೂ ಬಲಿಯಾದದ್ದು ಹೃದಯವಿದ್ರಾವಕ. “ಜನರನ್ನು ಸೆಳೆಯುವುದು ಸುಲಭ, ಆದರೆ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ನಿಜವಾದ ನಾಯಕತ್ವ” ಎಂಬ ಮಾತು ಎಲ್ಲ ನಾಯಕರಿಗೂ ಮಾರ್ಗದರ್ಶಿಯಾಗಬೇಕು. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಕಟ್ಟುನಿಟ್ಟಾದ ಜನಸಮೂಹ ನಿಯಂತ್ರಣ, ಮುನ್ನೆಚ್ಚರಿಕಾ ಕ್ರಮಗಳು ಮತ್ತು ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಖಚಿತಪಡಿಸಬೇಕು. ಸುರಕ್ಷತಾ ಮಾರ್ಗಸೂಚಿಗಳ ಆಧಾರದ ಮೇಲೆ ಕಾರ್ಯಕ್ರಮಗಳು ನಡೆಯುವಂತಾಗಬೇಕು. ಕರೂರು ದುರಂತವು ಇನ್ನು ಮುಂದೆ ದೇಶದಲ್ಲಿ ನಡೆಯುವ ರಾಜಕೀಯ ಸಮಾವೇಶಗಳಿಗೆ ಎಚ್ಚರಿಕೆಯ ಪಾಠವಾಗಲಿ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…