Andolana originals

ಓದುಗರ ಪತ್ರ: ಕೆಇಎ ಶಿಷ್ಯವೇತನಕ್ಕೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಿ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್‌ಆರ್ ಬಿ, ನ್ಯಾಯಾಂಗ ಸೇವೆಯ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿ ಮತ್ತು ಶಿಷ್ಯವೇತನ ನೀಡುವ ಸಲುವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಅದರಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಶಿಷ್ಯವೇತನ ಮತ್ತು ಅಭ್ಯರ್ಥಿ ಪ್ರವೇಶ ಪಡೆದ ತರಬೇತಿ ಕೇಂದ್ರಗಳಿಗೆ ಸರ್ಕಾರದಿಂದಲೇ ಹಣ ಪಾವತಿ ಮಾಡಲಾಗುತ್ತಿದೆ.

ಇದರನ್ವಯ ಕಳೆದ ಜೂನ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಕೆಇಎಯ ಇಲಾಖಾ ತಂತ್ರಾಂಶದಲ್ಲಿ ಒಟ್ಟಾರೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಲ್ಲಿಯವರೆಗೂ ಪ್ರಕಟಿಸದೇ ನಿರ್ಲಕ್ಷ್ಯ ವಹಿಸಿದೆ.

ಹೆಚ್ಚಾಗಿ ಬಡ, ಮಧ್ಯಮವರ್ಗದ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಪರೀಕ್ಷೆ ಬರೆದಿದ್ದರು. ಆದರೆ ಅಂತಿಮ ಪಟ್ಟಿಯೂ ಬಿಡುಗಡೆ ಆಗದೆ , ತರಬೇತಿಯನ್ನೂ ಪಡೆಯದೆ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ. ಹಾಗಾಗಿ ಸಮಾಜ ಕಲ್ಯಾಣ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಅವರಿಗೆ ಶಿಷ್ಯವೇತನ ದೊರೆಯುವಂತೆ ಮಾಡಲು ಮತ್ತು ತರಬೇತಿ ಕೇಂದ್ರಕ್ಕೆ ಸೇರಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಬೇಕು.

 – ಎಂ.ಪಿ.ದರ್ಶನ್ ಚಂದ್ರ ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

10 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

56 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

1 hour ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

4 hours ago