Andolana originals

ಓದುಗರ ಪತ್ರ: ಕೆಇಎ ಶಿಷ್ಯವೇತನಕ್ಕೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಿ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್‌ಆರ್ ಬಿ, ನ್ಯಾಯಾಂಗ ಸೇವೆಯ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿ ಮತ್ತು ಶಿಷ್ಯವೇತನ ನೀಡುವ ಸಲುವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಅದರಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಶಿಷ್ಯವೇತನ ಮತ್ತು ಅಭ್ಯರ್ಥಿ ಪ್ರವೇಶ ಪಡೆದ ತರಬೇತಿ ಕೇಂದ್ರಗಳಿಗೆ ಸರ್ಕಾರದಿಂದಲೇ ಹಣ ಪಾವತಿ ಮಾಡಲಾಗುತ್ತಿದೆ.

ಇದರನ್ವಯ ಕಳೆದ ಜೂನ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಕೆಇಎಯ ಇಲಾಖಾ ತಂತ್ರಾಂಶದಲ್ಲಿ ಒಟ್ಟಾರೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಲ್ಲಿಯವರೆಗೂ ಪ್ರಕಟಿಸದೇ ನಿರ್ಲಕ್ಷ್ಯ ವಹಿಸಿದೆ.

ಹೆಚ್ಚಾಗಿ ಬಡ, ಮಧ್ಯಮವರ್ಗದ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಪರೀಕ್ಷೆ ಬರೆದಿದ್ದರು. ಆದರೆ ಅಂತಿಮ ಪಟ್ಟಿಯೂ ಬಿಡುಗಡೆ ಆಗದೆ , ತರಬೇತಿಯನ್ನೂ ಪಡೆಯದೆ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ. ಹಾಗಾಗಿ ಸಮಾಜ ಕಲ್ಯಾಣ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಅವರಿಗೆ ಶಿಷ್ಯವೇತನ ದೊರೆಯುವಂತೆ ಮಾಡಲು ಮತ್ತು ತರಬೇತಿ ಕೇಂದ್ರಕ್ಕೆ ಸೇರಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಬೇಕು.

 – ಎಂ.ಪಿ.ದರ್ಶನ್ ಚಂದ್ರ ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago