ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ ತನ್ನದೆ ವಿಶೇಷತೆಗಳನ್ನು ಹೊಂದಿರುವುದರಿಂದ ದೇಶ ವಿದೇಶಗಳಿಂದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಈ ಬಾರಿ ತೀವ್ರವಾದ ಬರಗಾಲ ಇರುವುದರಿಂದ ಕುಡಿಯುವ ನೀರು, ಜನುವಾರುಗಳಿಗೆ ಮೇವಿನ ಕೊರತೆ, ಬೆಳೆ ಹಾನಿ ಆಗಿರುವುದರಿಂದ ಗ್ರಾಮೀಣ ಭಾಗದ ಜನರು ಜೀವನ ನಡೆಸಲು ಸಾಧ್ಯವಾಗದೆ ನಗರ ಪ್ರದೇಶಗಳ ಕಡೆಗೆ ಕೆಲಸ ಹುಡುಕಿಕೊಂಡು ಗುಳೆ ಹೋಗುತ್ತಿದ್ದಾರೆ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸುವುದರ ಮೂಲಕ ಜನರ ನೋವು,ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕು.
-ಬಿ. ಸಿ.ಸುರೇಶ್ ಕುಮಾರ್, ಸಂಶೋಧನಾ ವಿದ್ಯಾರ್ಥಿ, ಮೈಸೂರು



