ಮೈಸೂರಿನ ಕುವೆಂಪುನಗರ ಎಂ ಬ್ಲಾಕ್ನ ಗಣಪತಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ.
ಈ ಉದ್ಯಾನವನಕ್ಕೆ ಸೂಕ್ತ ರಕ್ಷಣೆ ಒದಗಿಸದ ಪರಿಣಾಮ ವಾತಾವರಣವೇ ಹಾಳಾಗಿದ್ದು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಮದ್ಯವ್ಯಸನಿಗಳು ಪಾರ್ಕ್ನಲ್ಲಿಯೇ ಧೂಮಪಾನ, ಮದ್ಯಪಾನ ಮಾಡುತ್ತಿದ್ದಾರೆ. ಅಲ್ಲದೆ ಕುಡಿದ ಬಳಿಕ ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ.
ಇನ್ನು ಈ ಉದ್ಯಾನವನದ ತುಂಬೆಲ್ಲ ಪ್ಲಾಸ್ಟಿಕ್ ಬಾಟಲಿಗಳು, ಕವರ್ಗಳು ಹರಡಿಕೊಂಡಿದ್ದು, ಕಸದ ರಾಶಿಯೇ ಸಂಗ್ರಹವಾಗಿ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಪಾರ್ಕ್ಗೆ ವಾಯುವಿಹಾರಕ್ಕೆಂದು ಬರುವವರಿಗೆ ಕಿರಿಕಿರಿಯಾಗುತ್ತಿದೆ.
ಪಾರ್ಕ್ ನಿರ್ವಹಣೆಯ ಗುತ್ತಿಗೆ ಪಡೆದಿರುವವರು ಇತ್ತ ಗಮನ ಹರಿಸದ ಪರಿಣಾಮ ಪಾರ್ಕ್ನಲ್ಲಿ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಿಷ ಜಂತುಗಳ ಕಾಟವೂ ಹೆಚ್ಚಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಪಾರ್ಕ್ ಅನ್ನು ಸ್ವಚ್ಛಗೊಳಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…