ಖಾದಿ ಉದ್ಯಮಕ್ಕೆ ಹೆಚ್ಚಿನ ಅವಕಾಶ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ, ಸರಕಾರಿ ನೌಕರರು ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಕಡ್ಡಾಯವಾಗಿ ಖಾದಿ ಬಟ್ಟೆಯನ್ನು ಧರಿಸಬೇಕು. ಎಂದು ಆದೇಶ ಹೊರಡಿಸಿರುವುದು ಶ್ಲಾಘನೀಯ.
ಇದರಿಂದ ಸರ್ಕಾರಿ ಅಧಿಕಾರಿಗಳು, ನೌಕರರಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ ಭಾವನೆ ಮೂಡಲು ನೆರವಾಗಲಿದೆ. ಖಾದಿ ಉದ್ಯಮ ಗ್ರಾಮೀಣ ಜನರ ಆರ್ಥಿಕತೆಯ ಮೂಲಗಳಲ್ಲಿ ಒಂದಾಗಿದ್ದು, ರಾಜ್ಯದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಸರ್ಕಾರದ ಆದೇಶದಿಂದ ಖಾದಿ ಉದ್ಯಮದ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಗ್ರಾಮೋದ್ಯೋಗ ಮಂಡಳಿ ಪ್ರಸ್ತುತ ನೀಡುತ್ತಿರುವ ರಿಯಾಯಿತಿ ಜೊತೆಗೆ ಶೇ.5 ರಷ್ಟು ವಿಶೇಷ ರಿಯಾಯಿತಿ ನೀಡಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





