ಖಾದಿ ಉದ್ಯಮಕ್ಕೆ ಹೆಚ್ಚಿನ ಅವಕಾಶ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ, ಸರಕಾರಿ ನೌಕರರು ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಕಡ್ಡಾಯವಾಗಿ ಖಾದಿ ಬಟ್ಟೆಯನ್ನು ಧರಿಸಬೇಕು. ಎಂದು ಆದೇಶ ಹೊರಡಿಸಿರುವುದು ಶ್ಲಾಘನೀಯ.
ಇದರಿಂದ ಸರ್ಕಾರಿ ಅಧಿಕಾರಿಗಳು, ನೌಕರರಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ ಭಾವನೆ ಮೂಡಲು ನೆರವಾಗಲಿದೆ. ಖಾದಿ ಉದ್ಯಮ ಗ್ರಾಮೀಣ ಜನರ ಆರ್ಥಿಕತೆಯ ಮೂಲಗಳಲ್ಲಿ ಒಂದಾಗಿದ್ದು, ರಾಜ್ಯದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಸರ್ಕಾರದ ಆದೇಶದಿಂದ ಖಾದಿ ಉದ್ಯಮದ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಗ್ರಾಮೋದ್ಯೋಗ ಮಂಡಳಿ ಪ್ರಸ್ತುತ ನೀಡುತ್ತಿರುವ ರಿಯಾಯಿತಿ ಜೊತೆಗೆ ಶೇ.5 ರಷ್ಟು ವಿಶೇಷ ರಿಯಾಯಿತಿ ನೀಡಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…