ಭಾರತದಲ್ಲಿ ನಡೆದ ಚೊಚ್ಚಲ ಖೋ-ಖೋ ವಿಶ್ವಕಪ್ ಪಂದ್ಯಾವಳಿ ಯಲ್ಲಿ ಭಾರತೀಯ ಮಹಿಳಾ ಹಾಗೂ ಪುರುಷರ ತಂಡಗಳು ವಿಶ್ವ ಚಾಂಪಿಯನ್ ಆಗುವ ಮೂಲಕ ಭಾರತಕ್ಕೆ ಕೀರ್ತಿ ತಂದಿವೆ.
ಭಾರತೀಯ ಖೋ-ಖೋ ಮಹಿಳಾ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾಗಿದ್ದ ಏಕೈಕ ಆಟಗಾರ್ತಿ ಚೈತ್ರ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಚೈತ್ರ ಮೂಲತಃ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು.
ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಫೈನಲ್ ತಲುಪಲು ಚೈತ್ರರವರ ಕೊಡುಗೆಯೂ ಅಪಾರ. ಅಲ್ಲದೆ ಫೈನಲ್ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ಕಪ್ ಮುಡಿಗೇರಿಸಿಕೊಳ್ಳಲು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಶ್ವಮಟ್ಟದಲ್ಲಿ ಕರ್ನಾಟಕದ ಹಾಗೂ ಮೈಸೂರಿನ ಕೀರ್ತಿಯನ್ನು ಹೆಚ್ಚಿಸಿರುವ ಮೈಸೂರಿನ ಕ್ರೀಡಾಪಟು ಚೈತ್ರರವರಿಗೆ ಅಭಿನಂದನೆಗಳು.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ.
ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…
ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…
ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…