ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಬ್ಬ ರೈತ ನಾಲ್ಕು ಬಾರಿ ಒಟಿಪಿ ಪಡೆಯಬೇಕಾದ ಅನಿವಾರ್ಯತೆಯಿದೆ. ಪದೇ ಪದೇ ಸರ್ವರ್ ಕೈಕೊಡುತ್ತಿದೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಶೇ.೬೦ರಷ್ಟು ನೆಟ್ವರ್ಕ್ ಸಮಸ್ಯೆ ಇರುವುದರಿಂದ ಇಂತಹ ಸಂಕೀರ್ಣ ಪ್ರಕ್ರಿಯೆಗಳು ರೈತರನ್ನು ಹೈರಾಣಾಗಿಸುತ್ತಿವೆ. ಸರ್ಕಾರವು ಈ ಕೂಡಲೇ ಸರ್ವರ್ ಸಾಮರ್ಥ್ಯ ಹೆಚ್ಚಿಸಿ ಇ-ಕೆವೈಸಿ ಗಡುವನ್ನು ಕನಿಷ್ಠ ೧೫ ದಿನಗಳ ಕಾಲ ವಿಸ್ತರಿಸಬೇಕು. ಕೇವಲ ಒಟಿಪಿ ಬದಲಿಗೆ ಬಯೋಮೆಟ್ರಿಕ್ ಅಥವಾ ಗ್ರಾಮ ಪಂಚಾಯಿತಿ ಮಟ್ಟದ ವಿಶೇಷ ಶಿಬಿರಗಳ ಮೂಲಕ ದಾಖಲಾತಿಗಳನ್ನು ದೃಢೀಕರಿಸುವ ಪರ್ಯಾಯ ಮಾರ್ಗ ಅನುಸರಿಸುವುದು ಉತ್ತಮ. ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರೈತರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…