ಓದುಗರ ಪತ್ರ
ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಕೈಗಾರಿಕೆ ಸ್ಥಾಪಿಸುವ ಮೂಲಕ ಯುವ ಜನತೆಗೆ ಉದ್ಯೋಗ ಕಲ್ಪಿಸಬೇಕು ಎಂದು ಮಾಜಿ ಸಚಿವ ಕೋಟೆ ಎಂ. ಶಿವಣ್ಣನವರು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರಿಗೆ ಮನವಿ ಮಾಡಿದ್ದಾರೆ ಎಂದು ದಿನ ಪತ್ರಿಕೆಗಳಲ್ಲಿ ವರದಿಯಾಗಿದೆ. ಇದು ಸ್ವಾಗತಾರ್ಹ ವಿಚಾರ.
ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪನವರ ವರದಿಯಲ್ಲಿ ಗುರುತಿಸಲ್ಪಟ್ಟಿದ್ದರೂ ಅದರ ನಿವಾರಣೆಗೆ ಇಷ್ಟು ವರ್ಷಗಳಾದರೂ ಸರ್ಕಾರದಿಂದ ಯಾವ ಪ್ರಯತ್ನವೂ ನಡೆದಿಲ್ಲ. ತಾಲ್ಲೂಕಿನಲ್ಲಿ ೩ ಪ್ರಮುಖ ಆಣೆಕಟ್ಟೆಗಳಿದ್ದರೂ ಇದರ ಪ್ರಯೋಜನ ದೊರಕುತ್ತಿರುವುದು, ನಂಜನಗೂಡು, ತಿ. ನರಸೀಪುರ, ಕೊಳ್ಳೇಗಾಲ ತಾಲ್ಲೂಕುಗಳಿಗೆ ಮಾತ್ರ. ನೀರಿನ ಲಭ್ಯತೆ ಇದ್ದರೂ ತಾಲ್ಲೂಕಿನಲ್ಲಿ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ.
ಕಬಿನಿ ಹಿನ್ನೀರಿನ ಉದ್ದಕ್ಕೂ ಅನೇಕ ರೆಸಾರ್ಟ್ಗಳು ನಾಯಿ ಕೊಡೆಗಳಂತೆ ತಲೆ ಎತ್ತಿವೆ. ಮುಂದೆ ಇನ್ನೂ ಅನೇಕ ರೆಸಾರ್ಟ್ಗಳು ತಲೆ ಎತ್ತಬಹುದು. ಹಣವಂತರು, ವಿಲಾಸಿಗಳು ಮೋಜು, ಮಸ್ತಿ ಮಾಡಲು ಬೆಂಗಳೂರು, ಹೊರ ರಾಜ್ಯಗಳಿಂದ ಇಲ್ಲಿಗೆ ಬರುತ್ತಾರೆ. ಆದರೆ ಸ್ಥಳೀಯರಿಗೆ ರೆಸಾರ್ಟ್ಗಳಿಂದ ಯಾವ ಪ್ರಯೋಜನವೂ ಇಲ್ಲ. ಬದಲಾಗಿ ಇಂತಹ ರೆಸಾರ್ಟ್ಗಳಿಂದ ಪರಿಸರಕ್ಕೆ ಹಾನಿಯಾಗುತ್ತದೆ. ರೆಸಾರ್ಟ್ಗಳು ಮೋಜು ಮಸ್ತಿಯ ಇನ್ನೊಂದು ಮುಖವಷ್ಟೇ. ಇಂತಹ ರೆಸಾರ್ಟ್ಗಳಿಗೆ ಅನುಮತಿ ಕೊಡುವ ಬದಲು ಸರ್ಕಾರ ಕೈಗಾರಿಕೆಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…