ಓದುಗರ ಪತ್ರ
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ತ್ವರಿತವಾಗಿ ಟೆಂಡರ್ ಕರೆಯಬೇಕು, ಮುಂದಿನ ಎರಡು ವರ್ಷಗಳಲ್ಲಿ ಎಲ್ಲ ಶಾಲೆಗಳೂ ಕಾರ್ಯಾರಂಭ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ.
ಇದನ್ನು ಗಮನಿಸಿದರೆ ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಇರುವ ಕಾಳಜಿ ಎನ್ನುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಆದರೆ ವಾಸ್ತವವೇ ಬೇರೆ ಇದೆ. ಈಗಾಗಲೇ ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳು ಸೊರಗಿವೆ. ಕೆಲವೆಡೆ ಶಾಲೆಗಳನ್ನೇ ಪಕ್ಕದ ಊರಿನ ಶಾಲೆಗೆ ವರ್ಗಾಯಿಸಲಾಗುತ್ತಿದೆ. ಇದನ್ನು ಶಿಕ್ಷಕರು, ಊರಿನ ಜನರು ವಿರೋಧಿಸುತ್ತಿದ್ದಾರೆ. ಇಂತಹ ವಿರೋಧವನ್ನು ಪಕ್ಕಕ್ಕಿಡಲು ಸರ್ಕಾರ ಕಂಡು ಕೊಂಡ ದಾರಿಯೇ ಈ ‘ಕರ್ನಾಟಕ ಪಬ್ಲಿಕ್ ಶಾಲೆ’! ಮುಂದಿನ ಕೆಲವರ್ಷಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಭಾಗಗಳಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳನ್ನೂ ಕೆಪಿಎಸ್ಗೆ ವಿಲೀನಗೊಳಿಸಿ, ಸರ್ಕಾರ ತನ್ನ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತದೆ. ಆಗ ಸಾವಿರಾರು ಸರ್ಕಾರಿ ಶಾಲೆಗಳು ಅಸ್ತಿತ್ವ ಕಳೆದುಕೊಳ್ಳುತ್ತವೆ.
ಇದಕ್ಕೆ ಪೂರಕವಾಗಿ ಈ ವರ್ಷದಿಂದಲೇ ಕೆಪಿಎಸ್ ಶಾಲೆಗಳ ಮಕ್ಕಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದು ಸರ್ಕಾರದ ಜಾಣ ನಡೆ ಅಷ್ಟೇ.
– ಮುಳ್ಳೂರು ಪ್ರಕಾಶ್, ಮೈಸೂರು
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…