ಓದುಗರ ಪತ್ರ
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಪಿಎಸ್ಸಿ ನಡೆಸುವ ಪರೀಕ್ಷೆಗಳು ಸರಣಿ ಹಗರಣಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಡಿಜಿಟಲ್ ಮೌಲ್ಯಮಾಪನದಲ್ಲಿ ಲೋಪದೋಷಗಳು ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಸದಾ ಸುದ್ದಿಯಲ್ಲಿರುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ.
ವರ್ಷಗಟ್ಟಲೆ ಹಗಲಿರುಳು ಕಷ್ಟಪಟ್ಟು ಓದುವ ಲಕ್ಷಾಂತರ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಈ ವ್ಯವಸ್ಥೆ ಆಟವಾಡುತ್ತಿದೆ. ಪರೀಕ್ಷೆಗಳನ್ನು ಮುಂದೂಡುವುದು, ಪರೀಕ್ಷೆ ಬರೆದವರು ನ್ಯಾಯಾಲಯದ ಮೆಟ್ಟಿಲೇರುವುದು ಮತ್ತು ಮರುಪರೀಕ್ಷೆಗಳನ್ನು ನಡೆಯುವುದರಿಂದ ಅಭ್ಯರ್ಥಿಗಳು ಮಾನಸಿಕವಾಗಿ ಜರ್ಜರಿತರಾಗುತ್ತಿದ್ದಾರೆ. ಇಂತಹ ಅವ್ಯವಹಾರಗಳು ಆಯೋಗದ ಮೇಲಿರುವ ನಂಬಿಕೆಯನ್ನೇ ಸಂಪೂರ್ಣವಾಗಿ ಕುಸಿಯುವಂತೆ ಮಾಡಿದೆ. ಈ ವ್ಯವಸ್ಥೆಯನ್ನು ಸರಿಪಡಿಸಲು ಕಟ್ಟುನಿಟ್ಟಾದ ತಂತ್ರಜ್ಞಾನದ ಬಳಕೆ ಮಾಡಬೇಕಿದೆ. ಪ್ರಶ್ನೆ ಪತ್ರಿಕೆಗಳ ತಯಾರಿಕೆಯಿಂದ ಹಿಡಿದು ವಿತರಣೆಯವರೆಗೆ ಅತ್ಯಾಧುನಿಕ, ಸೈಬರ್ ಸುರಕ್ಷಿತ ತಂತ್ರಜ್ಞಾನವನ್ನು ಬಳಸಬೇಕು. ಬಯೋಮೆಟ್ರಿಕ್ ಮತ್ತು ಜಿಪಿಎಸ್ ಆಧಾರಿತ ಕಣ್ಗಾವಲು ಕಡ್ಡಾಯಗೊಳಿಸುವ ಅವಶ್ಯಕತೆ ಇದೆ. ಎಲ್ಲದಕ್ಕಿಂತ ಹೆಚ್ಚಾಗಿ ಈ ಸಂಸ್ಥೆಯು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿ, ಉನ್ನತ ಮಟ್ಟದ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಮಾತ್ರ ಆಯೋಗದ ಪ್ರಮುಖ ಹುದ್ದೆಗಳಿಗೆ ನೇಮಿಸಬೇಕಿದೆ. ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ಆಯೋಗದಲ್ಲಿ ಸುಧಾರಣೆಗಳನ್ನು ತರಲು ತಕ್ಷಣವೇ ಮುಂದಾಗಬೇಕಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…
ಮಂಜು ಕೋಟೆ ಕೋಟೆ: ಬಸ್ ನಿಲ್ದಾಣದಲ್ಲಿ ದೊರೆಯದ ಶುದ್ಧ ಕುಡಿಯುವ ನೀರು, ಪ್ರಯಾಣಿಕರಿಗೆ ಸಮಸ್ಯೆ ಎಚ್.ಡಿ.ಕೋಟೆ: ಪಟ್ಟಣದ ಕೆಎಸ್ಆರ್ಟಿಸಿ ಬಸ್…
ಕೆ.ಬಿ.ರಮೇಶನಾಯಕ ಕೆಎಸ್ಆರ್ಟಿಸಿ ಬಸ್ಗಳಲ್ಲೂ ಬಿಎಂಟಿಸಿ ಮಾದರಿ ತಂತ್ರಾಂಶ ಅಳವಡಿಕೆ ೨೦ ನುರಿತ ತಂತ್ರಜ್ಞರಿಂದ ನಗರದಲ್ಲಿ ಸರ್ವೆ ಕಾರ್ಯ ಪ್ರಾರಂಭ ೮,೦೦೦…