ಓದುಗರ ಪತ್ರ
ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ ವ್ಯವಸ್ಥೆಗೆ ಅಂಟಿದ ಕಪ್ಪು ಚುಕ್ಕೆ. ವರ್ಷಗಟ್ಟಲೆ ಹಗಲಿರುಳೂ ಶ್ರಮಿಸುವ ಲಕ್ಷಾಂತರ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯವನ್ನು ಇಂತಹ ಅಕ್ರಮಗಳು ಬಲಿ ತೆಗೆದುಕೊಳ್ಳುತ್ತಿವೆ. ಹಗರಣಗಳು ನಡೆದಾಗಲೆಲ್ಲ ಕೇವಲ ತೇಪೆ ಹಚ್ಚುವ ತನಿಖಾ ಸಮಿತಿಗಳನ್ನು ರಚಿಸಿ ಕೈತೊಳೆದುಕೊಳ್ಳುವ ಪರಿಪಾಠ ನಿಲ್ಲಬೇಕು. ಹಣ ಮತ್ತು ರಾಜಕೀಯ ಬಲ ಇರುವವರಿಗಷ್ಟೇ ಹುದ್ದೆಗಳು ಸಿಗುತ್ತವೆ ಎಂಬ ಭಾವನೆ ಮೂಡಿದರೆ, ಇಡೀ ಪ್ರಜಾಪ್ರಭುತ್ವದ ಮೇಲೆಯೇ ಜನರಿಗೆ ಜುಗುಪ್ಸೆ ಉಂಟಾಗುತ್ತದೆ. ಸರ್ಕಾರವು ರಾಜಕೀಯ ಹಿತಾಸಕ್ತಿ ಬದಿಗಿಟ್ಟು, ಯುಪಿಎಸ್ಸಿ ಮಾದರಿಯಲ್ಲಿ ಪಾರದರ್ಶಕ ಡಿಜಿಟಲ್ ಸುರಕ್ಷತೆ ಹಾಗೂ ಕಠಿಣ ಸುಧಾರಣೆಗಳನ್ನು ತರ ಬೇಕು. ಭ್ರಷ್ಟಾಚಾರದ ಮೂಲಕ ಬರುವ ಅಧಿಕಾರಿಗಳಿಂದ ಪ್ರಾಮಾಣಿಕ ಜನಸೇವೆ ಎಂದಿಗೂ ಅಸಾಧ್ಯ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ತೆರವಾಯಿತೆ ಫುಟ್ಪಾತ್ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…
ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…
ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…
ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…
ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…
ದೂರ ನಂಜುಂಡಸ್ವಾಮಿ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಬೆಳೆ ಒಣಗುತ್ತಿರುವ ಹಿನ್ನೆಲೆಯಲ್ಲಿ ಅನ್ನದಾತರು ಕಂಗಾಲು ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ…