ಓದುಗರ ಪತ್ರ
ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ ವ್ಯವಸ್ಥೆಗೆ ಅಂಟಿದ ಕಪ್ಪು ಚುಕ್ಕೆ. ವರ್ಷಗಟ್ಟಲೆ ಹಗಲಿರುಳೂ ಶ್ರಮಿಸುವ ಲಕ್ಷಾಂತರ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯವನ್ನು ಇಂತಹ ಅಕ್ರಮಗಳು ಬಲಿ ತೆಗೆದುಕೊಳ್ಳುತ್ತಿವೆ. ಹಗರಣಗಳು ನಡೆದಾಗಲೆಲ್ಲ ಕೇವಲ ತೇಪೆ ಹಚ್ಚುವ ತನಿಖಾ ಸಮಿತಿಗಳನ್ನು ರಚಿಸಿ ಕೈತೊಳೆದುಕೊಳ್ಳುವ ಪರಿಪಾಠ ನಿಲ್ಲಬೇಕು. ಹಣ ಮತ್ತು ರಾಜಕೀಯ ಬಲ ಇರುವವರಿಗಷ್ಟೇ ಹುದ್ದೆಗಳು ಸಿಗುತ್ತವೆ ಎಂಬ ಭಾವನೆ ಮೂಡಿದರೆ, ಇಡೀ ಪ್ರಜಾಪ್ರಭುತ್ವದ ಮೇಲೆಯೇ ಜನರಿಗೆ ಜುಗುಪ್ಸೆ ಉಂಟಾಗುತ್ತದೆ. ಸರ್ಕಾರವು ರಾಜಕೀಯ ಹಿತಾಸಕ್ತಿ ಬದಿಗಿಟ್ಟು, ಯುಪಿಎಸ್ಸಿ ಮಾದರಿಯಲ್ಲಿ ಪಾರದರ್ಶಕ ಡಿಜಿಟಲ್ ಸುರಕ್ಷತೆ ಹಾಗೂ ಕಠಿಣ ಸುಧಾರಣೆಗಳನ್ನು ತರ ಬೇಕು. ಭ್ರಷ್ಟಾಚಾರದ ಮೂಲಕ ಬರುವ ಅಧಿಕಾರಿಗಳಿಂದ ಪ್ರಾಮಾಣಿಕ ಜನಸೇವೆ ಎಂದಿಗೂ ಅಸಾಧ್ಯ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…