ಕೆ.ಆರ್.ಪೇಟೆ ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ಓಡಾಡಲು ಆತಂಕ ಪಡುವಂತಾಗಿದೆ. ಈ ಬೀದಿ ನಾಯಿಗಳು ಕುರಿ, ಮೇಕೆ, ಕೋಳಿ ಹಾಗೂ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದು, ಮಹಿಳೆಯರು, ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಅಪಾಯವಿದೆ. ಈ ಬೀದಿ ನಾಯಿಗಳು ರಾತ್ರಿಯ ವೇಳೆ ದ್ವಿಚಕ್ರ ವಾಹನಗಳನ್ನು ಹಿಮ್ಮೆಟ್ಟುತ್ತಿದ್ದು, ಅವುಗಳಿಗೆ ಹೆದರಿ ವೇಗವಾಗಿ ವಾಹನ ಚಲಾಯಿಸಿ ಅನೇಕರು ಬಿದ್ದು ಗಾಯಗೊಂಡಿದ್ದಾರೆ. ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಇಲ್ಲಿನ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಗಮನಹರಿಸಿ ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು.
-ಮಹಾಲಕ್ಷ್ಮಿ, ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜು, ಮೈಸೂರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…