ಓದುಗರ ಪತ್ರ
ಕೆ.ಆರ್.ಎಸ್. ಹಿನ್ನೀರಿನ ಪ್ರದೇಶದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಭೂಮಿಯನ್ನು ಒತ್ತುವರಿ ಮಾಡಿ ರೆಸಾರ್ಟ್ಗಳನ್ನು ನಿರ್ಮಿಸಿ ಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಕೂಡಲೇ ಕೆ.ಆರ್.ಎಸ್. ಅಣೆಕಟ್ಟೆಗೆ ಸೇರಿದ ಭೂಮಿಯನ್ನು ಸರ್ವೆ ಮಾಡಿ, ಗಡಿ ಕಲ್ಲುಗಳನ್ನು ನೆಟ್ಟು ಸರ್ಕಾರಕ್ಕೆ ವರದಿ ನೀಡುವಂತೆ ಮಂಡ್ಯ ಮತ್ತು ಮೈಸೂರು ಜಿಲ್ಲಾಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು ಆದೇಶ ನೀಡಿರುವುದು ಸ್ವಾಗತಾರ್ಹ.
ಹಿನ್ನೀರಿನ ಪ್ರದೇಶದಲ್ಲಿರುವ ಗ್ರಾಮದ ರೈತರು ಕೆ.ಆರ್.ಎಸ್ಗೆ ಸೇರಿದ ಭೂಮಿಯಲ್ಲಿ ಪೂರ್ವ ಮುಂಗಾರು ಸಮಯದಲ್ಲಿ, ಅಲಸಂದೆ, ಜೋಳ ಮತ್ತು ಎಳ್ಳು ಬೆಳೆಗಳನ್ನು ಬೆಳೆಯಲು ಭೂಮಿಯನ್ನು ಉಳುಮೆ ಮಾಡುವುದರಿಂದ ರಾಸಾಯನಿಕ ಗೊಬ್ಬರ ಸೇರಿ ಜಲಾಶಯದ ನೀರು ಕಲುಷಿತವಾಗುತ್ತಿದ್ದು, ಸಂಬಂಧಪಟ್ಟವರು ಹಿನ್ನೀರಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆಗೂ ಕಡಿವಾಣ ಹಾಕಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…