Andolana originals

ಓದುಗರ ಪತ್ರ: ಕುವೆಂಪು ಅವರಿಗೆ ಭಾರತರತ್ನಕ್ಕೆ ಶಿಫಾರಸು ಶ್ಲಾಘನೀಯ

ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರು ವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಭಾರತರತ್ನ’ ವನ್ನು ಮರಣೋತ್ತರವಾಗಿ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ.

ಕನ್ನಡ ಭಾಷೆಯ ಸಾಹಿತ್ಯ ಸಾಂಸ್ಕ ತಿಕ ಲೋಕವನು  ಶ್ರೀಮಂತ ಗೊಳಿಸಿದವರಲ್ಲಿ ಕುವೆಂಪು ಎಂದಿಗೂ ಅಗ್ರಗಣ್ಯರು. ತಮ್ಮ ಜೀವಮಾನವನ್ನೆಲ್ಲಾ ವೈಚಾರಿಕತೆಗೆ ಒತ್ತು ನೀಡಿ ಮೌಢ್ಯ ಕಟ್ಟುಪಾಡುಗಳಿಗೆ ಸಡ್ಡು ಹೊಡೆದು ತಾವು ನುಡಿದಂತೆ ನಡೆದು ಬರೆದಂತೆ ಬದುಕಿ ವಿಶಾಲ ಮನೋಭಾವಹೊಂದಿ ವೈಜ್ಞಾನಿಕತೆಗೆ ಮುನ್ನೆಲೆ ಹಾಕಿದ ಸಮ ಸಮಾಜದ ಆದರ್ಶವಾದಿ. ಕೇಂದ್ರ ಸರ್ಕಾರವು ಅರ್ಹ ಹಾಗೂ ಯೋಗ್ಯರಾದ ಇವರಿಗೆ ಮರಣೋತ್ತರವಾಗಿ ‘ಭಾರತರತ್ನ ’ ನೀಡಲಿ.

– ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

3 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

4 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

5 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

10 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

13 hours ago