Mysore
25
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಓದುಗರ ಪತ್ರ: ಕೆರೆ ಏರಿ ಮೇಲಿನ ಗಿಡಗಂಟಿ ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹಾಗೂ ನೂರಲಕುಪ್ಪೆ ಗ್ರಾಮಗಳ ನಡುವೆ ಇರುವ ಕೆರೆಯ ಏರಿಯ ಮೇಲಿನ ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನಗಳ ಸಂಚಾರಕ್ಕೆ
ಅಡಚಣೆಯಾಗುತ್ತಿದೆ.
ರಸ್ತೆ ರಾಮೇನಹಳ್ಳಿ, ಜಿಯಾರಾ, ನೂರಲಕುಪ್ಪೆ ‘ಸಿ’ ಯಲಮತ್ತೂರು, ಬೀಚನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿರುತ್ತದೆ. ಆದರೆ ಈ ರಸ್ತೆ ತಿರುವಿನಿಂದ ಕೂಡಿದ್ದು, ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟೆಗಳು ಬೆಳೆದುಕೊಂಡಿರುವುದರಿಂದ ತಿರುವಿನಲ್ಲಿ ಎದುರುಗಡೆಯಿಂದ ಬರುವ ವಾಹನಗಳು ಕಾಣದೆ ಅಪಘಾತಗಳಾಗುವ ಸಾಧ್ಯತೆಗಳವೆ. ಇದೇ ರಸ್ತೆಯಲ್ಲಿ ನಿತ್ಯ ಗ್ರಾಮ ಪಂಚಾಯಿತಿಯ ಸದಸ್ಯರು ಓಡಾಡುತ್ತಿದ್ದರೂ ಇದರ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರು ಈ ರಸ್ತೆಯ ಎರಡೂ ಅಂಚಿನಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಬೇಕಿದೆ.
ಮಹೇಶ್‌ ಅಂತರಸಂತೆ, ಎಚ್.ಡಿ.ಕೋಟೆ ತಾ.

 

Tags:
error: Content is protected !!