Andolana originals

ಓದುಗರ ಪತ್ರ: ಕೆರೆ ಏರಿ ಮೇಲಿನ ಗಿಡಗಂಟಿ ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹಾಗೂ ನೂರಲಕುಪ್ಪೆ ಗ್ರಾಮಗಳ ನಡುವೆ ಇರುವ ಕೆರೆಯ ಏರಿಯ ಮೇಲಿನ ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನಗಳ ಸಂಚಾರಕ್ಕೆ
ಅಡಚಣೆಯಾಗುತ್ತಿದೆ.
ರಸ್ತೆ ರಾಮೇನಹಳ್ಳಿ, ಜಿಯಾರಾ, ನೂರಲಕುಪ್ಪೆ ‘ಸಿ’ ಯಲಮತ್ತೂರು, ಬೀಚನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿರುತ್ತದೆ. ಆದರೆ ಈ ರಸ್ತೆ ತಿರುವಿನಿಂದ ಕೂಡಿದ್ದು, ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟೆಗಳು ಬೆಳೆದುಕೊಂಡಿರುವುದರಿಂದ ತಿರುವಿನಲ್ಲಿ ಎದುರುಗಡೆಯಿಂದ ಬರುವ ವಾಹನಗಳು ಕಾಣದೆ ಅಪಘಾತಗಳಾಗುವ ಸಾಧ್ಯತೆಗಳವೆ. ಇದೇ ರಸ್ತೆಯಲ್ಲಿ ನಿತ್ಯ ಗ್ರಾಮ ಪಂಚಾಯಿತಿಯ ಸದಸ್ಯರು ಓಡಾಡುತ್ತಿದ್ದರೂ ಇದರ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರು ಈ ರಸ್ತೆಯ ಎರಡೂ ಅಂಚಿನಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಬೇಕಿದೆ.
ಮಹೇಶ್‌ ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

53 mins ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

4 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

5 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

5 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

5 hours ago