Andolana originals

ಓದುಗರ ಪತ್ರ: ಕೆರೆಗಳ ಪುನಶ್ಚೇತನ ಸ್ವಾಗತಾರ್ಹ

ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ.

ದಳವಾಯಿ,ಹುಯಿಲಾಳು, ಹಿನಕಲ್, ದೇವನೂರು, ಭುಗತಗಳ್ಳಿ ಹಾಗೂ ವಾಜಮಂಗಲ ಕೆರೆಗಳ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ೪೦ ಕೋಟಿ ರೂ.ಗಳನ್ನು ವೆಚ್ಚ ಮಾಡಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಕೆರೆಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಯುಕ್ತರು ತಿಳಿಸಿರುವುದು ಶ್ಲಾಘನೀಯ.

ಕೆರೆಗಳ ಪುನಶ್ಚೇತನ ಕಾಮಗಾರಿ ಶುರು ಮಾಡುವ ಮೊದಲು ಸರ್ವೆ ನಡೆಸಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಕಾಮಗಾರಿ ಆರಂಭಿಸುವುದು ಒಳ್ಳೆಯದು. ಜಿಲ್ಲಾಧಿಕಾರಿಗಳು ಹಾಗೂ ಎಂಡಿಎ ಆಯುಕ್ತರು ಕೆರೆಗಳ ಪುನಶ್ಚೇತನ ಕಾಮಗಾರಿ ಕಳಪೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದು ಅಗತ್ಯ.

– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

9 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

11 hours ago