ಓದುಗರ ಪತ್ರ
ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ.
ದಳವಾಯಿ,ಹುಯಿಲಾಳು, ಹಿನಕಲ್, ದೇವನೂರು, ಭುಗತಗಳ್ಳಿ ಹಾಗೂ ವಾಜಮಂಗಲ ಕೆರೆಗಳ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ೪೦ ಕೋಟಿ ರೂ.ಗಳನ್ನು ವೆಚ್ಚ ಮಾಡಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಕೆರೆಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಯುಕ್ತರು ತಿಳಿಸಿರುವುದು ಶ್ಲಾಘನೀಯ.
ಕೆರೆಗಳ ಪುನಶ್ಚೇತನ ಕಾಮಗಾರಿ ಶುರು ಮಾಡುವ ಮೊದಲು ಸರ್ವೆ ನಡೆಸಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಕಾಮಗಾರಿ ಆರಂಭಿಸುವುದು ಒಳ್ಳೆಯದು. ಜಿಲ್ಲಾಧಿಕಾರಿಗಳು ಹಾಗೂ ಎಂಡಿಎ ಆಯುಕ್ತರು ಕೆರೆಗಳ ಪುನಶ್ಚೇತನ ಕಾಮಗಾರಿ ಕಳಪೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದು ಅಗತ್ಯ.
– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…