ಓದುಗರ ಪತ್ರ
ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ.
ದಳವಾಯಿ,ಹುಯಿಲಾಳು, ಹಿನಕಲ್, ದೇವನೂರು, ಭುಗತಗಳ್ಳಿ ಹಾಗೂ ವಾಜಮಂಗಲ ಕೆರೆಗಳ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ೪೦ ಕೋಟಿ ರೂ.ಗಳನ್ನು ವೆಚ್ಚ ಮಾಡಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಕೆರೆಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಯುಕ್ತರು ತಿಳಿಸಿರುವುದು ಶ್ಲಾಘನೀಯ.
ಕೆರೆಗಳ ಪುನಶ್ಚೇತನ ಕಾಮಗಾರಿ ಶುರು ಮಾಡುವ ಮೊದಲು ಸರ್ವೆ ನಡೆಸಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಕಾಮಗಾರಿ ಆರಂಭಿಸುವುದು ಒಳ್ಳೆಯದು. ಜಿಲ್ಲಾಧಿಕಾರಿಗಳು ಹಾಗೂ ಎಂಡಿಎ ಆಯುಕ್ತರು ಕೆರೆಗಳ ಪುನಶ್ಚೇತನ ಕಾಮಗಾರಿ ಕಳಪೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದು ಅಗತ್ಯ.
– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…