ಓದುಗರ ಪತ್ರ
ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ.
ದಳವಾಯಿ,ಹುಯಿಲಾಳು, ಹಿನಕಲ್, ದೇವನೂರು, ಭುಗತಗಳ್ಳಿ ಹಾಗೂ ವಾಜಮಂಗಲ ಕೆರೆಗಳ ಪುನಶ್ಚೇತನಕ್ಕೆ ಮೊದಲ ಹಂತದಲ್ಲಿ ೪೦ ಕೋಟಿ ರೂ.ಗಳನ್ನು ವೆಚ್ಚ ಮಾಡಲು ಉದ್ದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಕೆರೆಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಯುಕ್ತರು ತಿಳಿಸಿರುವುದು ಶ್ಲಾಘನೀಯ.
ಕೆರೆಗಳ ಪುನಶ್ಚೇತನ ಕಾಮಗಾರಿ ಶುರು ಮಾಡುವ ಮೊದಲು ಸರ್ವೆ ನಡೆಸಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಕಾಮಗಾರಿ ಆರಂಭಿಸುವುದು ಒಳ್ಳೆಯದು. ಜಿಲ್ಲಾಧಿಕಾರಿಗಳು ಹಾಗೂ ಎಂಡಿಎ ಆಯುಕ್ತರು ಕೆರೆಗಳ ಪುನಶ್ಚೇತನ ಕಾಮಗಾರಿ ಕಳಪೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದು ಅಗತ್ಯ.
– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…