Andolana originals

ಓದುಗರ ಪತ್ರ: ವನ್ಯಜೀವಿಗಳಿಗೆ ಕಂಟಕವಾದ ಲಂಟಾನ ಕಳೆ

ಲಂಟಾನ ಕಳೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಲಂಟಾನವು ಕಾಡಿನ ಶೇ.೬೦ರಷ್ಟು ಭಾಗವನ್ನು ಆವರಿಸಿದ್ದು, ಸ್ಥಳೀಯ ಜೀವವೈವಿಧ್ಯತೆಯನ್ನು ಹಾಳುಮಾಡಿ, ಹುಲ್ಲು ಹಾಗೂ ಪರಿಸರ ಸ್ನೇಹಿ, ಪಶು ಆಹಾರ ಗಿಡಗಳು ಬೆಳೆಯಲು ಅವಕಾಶ ಮಾಡಿಕೊಡದೆ, ಜಿಂಕೆ, ಕಡವೆ, ಕಾಡೆಮ್ಮೆಗಳ ಸಂಖ್ಯೆ ಕಡಿಮೆ ಆಗುತ್ತಿದ್ದು, ಪರಿಣಾಮವಾಗಿ ಮಾಂಸಾಹಾರಿ ಪ್ರಾಣಿಗಳಿಗೆ ಆಹಾರದ ಕೊರತೆ ಸೃಷ್ಟಿಯಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವನ್ಯಜೀವಿ ಛಾಯಾಗ್ರಾಹಕ ಹಾಗೂ ಪರಿಸರ ತಜ್ಞರಾದ ಕೃಪಾಕರ್ ಅವರು ತಿಳಿಸಿದ್ದು, ಇದು ಅಕ್ಷರಶಃ ಸತ್ಯವಾಗಿದೆ.

ಲಂಟಾನ ಕಳೆಯನ್ನು ನಿರ್ಮೂಲ ಮಾಡಬೇಕಾದರೆ ಕೈಯಿಂದಲೇ ಕೀಳಬೇಕು, ಉದ್ಯೋಗ ಖಾತರಿ ಅಡಿ ಯೋಜನೆಯಲ್ಲಿ ಅರಣ್ಯದಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನರನ್ನು ಬಳಸಿಕೊಂಡು ಲಂಟಾನ ಕಳೆ ತೆರವುಗೊಳಿಸಲು ಮುಂದಾದರೆ ಅವರಿಗೆ ವರ್ಷವಿಡೀ ಉದ್ಯೋಗ ನೀಡಿದಂತಾಗುತ್ತದೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟವರು ಕೂಡಲೇ ಗಮನಹರಿಸುವುದು ಅಗತ್ಯವಾಗಿದೆ.

-ಬೆಸಗರಹಳ್ಳಿ ರವಿ ಪ್ರಸಾದ್,ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago