ಓದುಗರ ಪತ್ರ
ಲಂಟಾನ ಕಳೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಲಂಟಾನವು ಕಾಡಿನ ಶೇ.೬೦ರಷ್ಟು ಭಾಗವನ್ನು ಆವರಿಸಿದ್ದು, ಸ್ಥಳೀಯ ಜೀವವೈವಿಧ್ಯತೆಯನ್ನು ಹಾಳುಮಾಡಿ, ಹುಲ್ಲು ಹಾಗೂ ಪರಿಸರ ಸ್ನೇಹಿ, ಪಶು ಆಹಾರ ಗಿಡಗಳು ಬೆಳೆಯಲು ಅವಕಾಶ ಮಾಡಿಕೊಡದೆ, ಜಿಂಕೆ, ಕಡವೆ, ಕಾಡೆಮ್ಮೆಗಳ ಸಂಖ್ಯೆ ಕಡಿಮೆ ಆಗುತ್ತಿದ್ದು, ಪರಿಣಾಮವಾಗಿ ಮಾಂಸಾಹಾರಿ ಪ್ರಾಣಿಗಳಿಗೆ ಆಹಾರದ ಕೊರತೆ ಸೃಷ್ಟಿಯಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವನ್ಯಜೀವಿ ಛಾಯಾಗ್ರಾಹಕ ಹಾಗೂ ಪರಿಸರ ತಜ್ಞರಾದ ಕೃಪಾಕರ್ ಅವರು ತಿಳಿಸಿದ್ದು, ಇದು ಅಕ್ಷರಶಃ ಸತ್ಯವಾಗಿದೆ.
ಲಂಟಾನ ಕಳೆಯನ್ನು ನಿರ್ಮೂಲ ಮಾಡಬೇಕಾದರೆ ಕೈಯಿಂದಲೇ ಕೀಳಬೇಕು, ಉದ್ಯೋಗ ಖಾತರಿ ಅಡಿ ಯೋಜನೆಯಲ್ಲಿ ಅರಣ್ಯದಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನರನ್ನು ಬಳಸಿಕೊಂಡು ಲಂಟಾನ ಕಳೆ ತೆರವುಗೊಳಿಸಲು ಮುಂದಾದರೆ ಅವರಿಗೆ ವರ್ಷವಿಡೀ ಉದ್ಯೋಗ ನೀಡಿದಂತಾಗುತ್ತದೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟವರು ಕೂಡಲೇ ಗಮನಹರಿಸುವುದು ಅಗತ್ಯವಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್,ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…