Andolana originals

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ ಲಾಠಿ ಪ್ರಹಾರದಿಂದ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ತಪ್ಪೇ? ಮೋದಿ ನೇತೃತ್ವದ ಸರ್ಕಾರವನ್ನು ಯಾರೂ ಪ್ರಶ್ನಿಸುವಂತಿಲ್ಲವೇ? ದೇಶದ ಯುವಜನತೆಯ ಭವಿಷ್ಯದ ಜೊತೆ ಸರ್ಕಾರ ಚೆಟವಾಡುತ್ತಿದೆ. ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ನ್ಯಾಯಯುತವಾಗಿ ಹಕ್ಕುಗಳಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆದು ಕೇಂದ್ರ ಸರ್ಕಾರ ಅಮಾನುಷವಾಗಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸಿದೆ.

ವಿದ್ಯಾರ್ಥಿಗಳ ಪರವಾಗಿ ಬೆಂಬಲಕ್ಕೆ ನಿಂತ ಪ್ರತಿಪಕ್ಷ ನಾಯಕರನ್ನು ಪೊಲೀಸ್ ಬಲಪ್ರಯೋಗದ ಮೂಲಕ ಮೌನಗೊಳಿಸಲು ಹೊರಟಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಪ್ರಜಾಪ್ರಭುತ್ವ ವಿರೋಽ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕಿದೆ.

-ವಿಜಯ್‌ಕುಮಾರ್, ಎಂಬಿಎ ವಿದ್ಯಾರ್ಥಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

9 mins ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

12 mins ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

14 mins ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

20 mins ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

25 mins ago

ಮುಂಗಾರು ಮುನಿದರೂ ಬೆಳೆ ವಿಮೆಗಿಲ್ಲ ರೈತರ ಆಸಕ್ತಿ

ಗಿರೀಶ್ ಹುಣಸೂರು ಜಿಲ್ಲೆಯಲ್ಲಿ ಈವರೆಗೆ ೬,೯೧೦ ರೈತರಿಂದಷ್ಟೇ ಬೆಳೆ ವಿಮೆ ನೋಂದಣಿ ಮೈಸೂರು: ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಿಂದಾಗಿ ಪ್ರಸಕ್ತ ವರ್ಷ…

30 mins ago