ಓದುಗರ ಪತ್ರ
ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದಲ್ಲಿ ಇರುವ ಜಿಲ್ಲಾ ಸೈನಿಕ್ ಭವನದಲ್ಲಿ ವೀರ್ ಪರಿವಾರ್ ಸಹಾಯತಾ ಯೋಜನೆ ಅಡಿಯಲ್ಲಿ ‘ ಉಚಿತ ಕಾನೂನು ಸೇವೆಗಳ ಕ್ಲಿನಿಕ್‘ ಅನ್ನು ಇತ್ತೀಚೆಗೆ ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಡುವ ಸೈನಿಕರ ನೆಮ್ಮದಿಯ ಜೀವನಕ್ಕಾಗಿ ಹಾಗೂ ಅವರ ಕುಟುಂಬದ ಸದಸ್ಯರ ಕಾನೂನಾತ್ಮಕ ಸಮಸ್ಯೆಗಳ ನಿವಾರಣೆಗಾಗಿ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ.
ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು, ಅವರ ಅವಲಂಬಿತರಿಗೆ ಆಸ್ತಿ, ವೈವಾಹಿಕ ಹಾಗೂ ನಾಗರಿಕ ವಿವಾದಗಳು ಹಾಗೂ ಕಲ್ಯಾಣ ಯೋಜನೆ ಸಂಬಂಧವಾಗಿ ಕಾನೂನು ವಿಷಯದಲ್ಲಿ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳು ಮತ್ತು ಸಹಾಯವನ್ನು ಈ ಕ್ಲಿನಿಕ್ನಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ೨-೩ ವರ್ಷಗಳ ಹಿಂದೆ ‘ ನಮ್ಮ ಕ್ಲಿನಿಕ್‘ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಉಚಿತ ಆರೋಗ್ಯ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಕಾನೂನು ಸೇವೆಗಳ ಕ್ಲಿನಿಕ್ ಆರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…