ಓದುಗರ ಪತ್ರ
ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದಲ್ಲಿ ಇರುವ ಜಿಲ್ಲಾ ಸೈನಿಕ್ ಭವನದಲ್ಲಿ ವೀರ್ ಪರಿವಾರ್ ಸಹಾಯತಾ ಯೋಜನೆ ಅಡಿಯಲ್ಲಿ ‘ ಉಚಿತ ಕಾನೂನು ಸೇವೆಗಳ ಕ್ಲಿನಿಕ್‘ ಅನ್ನು ಇತ್ತೀಚೆಗೆ ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಡುವ ಸೈನಿಕರ ನೆಮ್ಮದಿಯ ಜೀವನಕ್ಕಾಗಿ ಹಾಗೂ ಅವರ ಕುಟುಂಬದ ಸದಸ್ಯರ ಕಾನೂನಾತ್ಮಕ ಸಮಸ್ಯೆಗಳ ನಿವಾರಣೆಗಾಗಿ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ.
ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು, ಅವರ ಅವಲಂಬಿತರಿಗೆ ಆಸ್ತಿ, ವೈವಾಹಿಕ ಹಾಗೂ ನಾಗರಿಕ ವಿವಾದಗಳು ಹಾಗೂ ಕಲ್ಯಾಣ ಯೋಜನೆ ಸಂಬಂಧವಾಗಿ ಕಾನೂನು ವಿಷಯದಲ್ಲಿ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳು ಮತ್ತು ಸಹಾಯವನ್ನು ಈ ಕ್ಲಿನಿಕ್ನಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ೨-೩ ವರ್ಷಗಳ ಹಿಂದೆ ‘ ನಮ್ಮ ಕ್ಲಿನಿಕ್‘ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಉಚಿತ ಆರೋಗ್ಯ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಕಾನೂನು ಸೇವೆಗಳ ಕ್ಲಿನಿಕ್ ಆರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…