Andolana originals

ಓದುಗರ ಪತ್ರ:  ‘ಕಾನೂನು ಕ್ಲಿನಿಕ್ ’ ಕ್ರಾಂತಿಕಾರಿ ಯೋಜನೆ

ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದಲ್ಲಿ ಇರುವ ಜಿಲ್ಲಾ ಸೈನಿಕ್ ಭವನದಲ್ಲಿ ವೀರ್ ಪರಿವಾರ್ ಸಹಾಯತಾ ಯೋಜನೆ ಅಡಿಯಲ್ಲಿ ‘ ಉಚಿತ ಕಾನೂನು ಸೇವೆಗಳ ಕ್ಲಿನಿಕ್‘ ಅನ್ನು ಇತ್ತೀಚೆಗೆ ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ.  ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಡುವ ಸೈನಿಕರ ನೆಮ್ಮದಿಯ ಜೀವನಕ್ಕಾಗಿ ಹಾಗೂ ಅವರ ಕುಟುಂಬದ ಸದಸ್ಯರ ಕಾನೂನಾತ್ಮಕ ಸಮಸ್ಯೆಗಳ ನಿವಾರಣೆಗಾಗಿ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ.

ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು, ಅವರ ಅವಲಂಬಿತರಿಗೆ ಆಸ್ತಿ, ವೈವಾಹಿಕ ಹಾಗೂ ನಾಗರಿಕ ವಿವಾದಗಳು ಹಾಗೂ ಕಲ್ಯಾಣ ಯೋಜನೆ ಸಂಬಂಧವಾಗಿ ಕಾನೂನು ವಿಷಯದಲ್ಲಿ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳು ಮತ್ತು ಸಹಾಯವನ್ನು ಈ ಕ್ಲಿನಿಕ್‌ನಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ೨-೩ ವರ್ಷಗಳ ಹಿಂದೆ ‘ ನಮ್ಮ ಕ್ಲಿನಿಕ್‘ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಉಚಿತ ಆರೋಗ್ಯ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಕಾನೂನು ಸೇವೆಗಳ ಕ್ಲಿನಿಕ್ ಆರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

1 hour ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

1 hour ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

3 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

3 hours ago