ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ ಕೃತ್ಯವನ್ನು ಎಸಗಿರುವ ಆರೋಪಿಯನ್ನು ಸ್ವತಃ ಗ್ರಾಮಸ್ಥರೇ ನೇರವಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕೃತ್ಯವನ್ನು ಎಸಗಿರುವ ವ್ಯಕ್ತಿಯ ಹಿಂದೆ ಕೆಲಸ ಮಾಡಿರುವ ಕಾಣದ ಕೈಗಳು ಯಾವುದು ಎಂದು ತಕ್ಷಣವೇ ಹುಡುಕಿ ಅವರಿಗೆ ಕಾನೂನಿನ ಅಡಿಯಲ್ಲಿ ತಕ್ಕ ಶಿಕ್ಷೆ ವಿಧಿಸಲೇಬೇಕು.ಅಲ್ಲದೇ ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಬಾಬಾಸಾಹೇಬರಲ್ಲದೆ ಬೇರೆ ಯಾವುದೇ ರಾಷ್ಟ್ರ ನಾಯಕರಿಗೂ ಈ ರೀತಿಯ ಅಪಮಾನಗಳು ಆಗದಂತೆ ಕಾನೂನು ರೂಪಿಸಲು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕು.
– ರವಿಕುಮಾರ್, ಹರಳಿಪುರ




