Andolana originals

ಓದುಗರ ಪತ್ರ: ರಾಜಕೀಯ ಬಿಟ್ಟು ದಸರಾ ಬಗ್ಗೆ ಮಾತನಾಡಿ

ಮೈಸೂರು ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಜನರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಡೀ ನಾಡೇ ನವರಾತ್ರಿಯ ಸಂಭ್ರಮದಲ್ಲಿ ಮುಳುಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಮುಡಾ ಪ್ರಕರಣ ಸಂಚಲನ ಸೃಷ್ಟಿಸಿದ್ದು, ರಾಜ್ಯದ ಮುಖ್ಯಮಂತ್ರಿಯೇ ಆರೋಪಿ ಸ್ಥಾನದಲ್ಲಿ ನಿಂತಿರುವುದು ಬೇಸರದ ಸಂಗತಿ. ಈಗ ಮೈಸೂರಿನಲ್ಲಿ ಎಲ್ಲಿ ನೋಡಿದರೂ ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಿವೆ. ಕಾರ್ಯಕ್ರಮಗಳ ಉದ್ಘಾಟನಾ ವೇದಿಕೆಗಳು ಜನಪ್ರತಿನಿಧಿಗಳಿಂದ ತುಂಬಿರುತ್ತವೆ. ಈ ವೇಳೆ ಜನಪ್ರತಿನಿಧಿಗಳು ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಸಾಹಿತ್ಯದ ಬಗ್ಗೆ ಮಾತನಾಡಬೇಕು, ಆದರೆ ಮೊನ್ನೆ ಚಾಮುಂಡಿಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜಾ.ದಳ ಶಾಸಕ ಜಿ.ಟಿ.ದೇವೇಗೌಡ ದಸರಾ ಕುರಿತು ಮಾತನಾಡುವ ಬದಲಿಗೆ ಮುಡಾ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಸಾರ್ವಜನಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿಸಿಕೊಳ್ಳುವುದು ಎಷ್ಟು ಸರಿ? ಸರ್ಕಾರಿ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ಇಲ್ಲಿ ರಾಜಕಾರಣಿಗಳು ಕಾರ್ಯಕ್ರಮದ ಬಗ್ಗೆ ಮಾತ್ರ ಮಾತನಾಡಬೇಕು. ಮುಂದಾದರೂ ಯಾವ ವೇದಿಕೆಯಲ್ಲಿ ಯಾವ ವಿಚಾರ ಮಾತನಾಡಬೇಕು ಎಂಬುದನ್ನು ರಾಜಕಾರಣಿಗಳು ಅರಿತುಕೊಳ್ಳಲಿ.
ಶಿವಕುಮಾರ, ತುಂಬಸೋಗೆ, ಎಚ್‌.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

1 hour ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

1 hour ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

1 hour ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

1 hour ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

1 hour ago