Andolana originals

ಓದುಗರ ಪತ್ರ: ರಾಜಕೀಯ ಬಿಟ್ಟು ದಸರಾ ಬಗ್ಗೆ ಮಾತನಾಡಿ

ಮೈಸೂರು ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಜನರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಡೀ ನಾಡೇ ನವರಾತ್ರಿಯ ಸಂಭ್ರಮದಲ್ಲಿ ಮುಳುಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಮುಡಾ ಪ್ರಕರಣ ಸಂಚಲನ ಸೃಷ್ಟಿಸಿದ್ದು, ರಾಜ್ಯದ ಮುಖ್ಯಮಂತ್ರಿಯೇ ಆರೋಪಿ ಸ್ಥಾನದಲ್ಲಿ ನಿಂತಿರುವುದು ಬೇಸರದ ಸಂಗತಿ. ಈಗ ಮೈಸೂರಿನಲ್ಲಿ ಎಲ್ಲಿ ನೋಡಿದರೂ ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಿವೆ. ಕಾರ್ಯಕ್ರಮಗಳ ಉದ್ಘಾಟನಾ ವೇದಿಕೆಗಳು ಜನಪ್ರತಿನಿಧಿಗಳಿಂದ ತುಂಬಿರುತ್ತವೆ. ಈ ವೇಳೆ ಜನಪ್ರತಿನಿಧಿಗಳು ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಸಾಹಿತ್ಯದ ಬಗ್ಗೆ ಮಾತನಾಡಬೇಕು, ಆದರೆ ಮೊನ್ನೆ ಚಾಮುಂಡಿಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜಾ.ದಳ ಶಾಸಕ ಜಿ.ಟಿ.ದೇವೇಗೌಡ ದಸರಾ ಕುರಿತು ಮಾತನಾಡುವ ಬದಲಿಗೆ ಮುಡಾ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಸಾರ್ವಜನಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿಸಿಕೊಳ್ಳುವುದು ಎಷ್ಟು ಸರಿ? ಸರ್ಕಾರಿ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ಇಲ್ಲಿ ರಾಜಕಾರಣಿಗಳು ಕಾರ್ಯಕ್ರಮದ ಬಗ್ಗೆ ಮಾತ್ರ ಮಾತನಾಡಬೇಕು. ಮುಂದಾದರೂ ಯಾವ ವೇದಿಕೆಯಲ್ಲಿ ಯಾವ ವಿಚಾರ ಮಾತನಾಡಬೇಕು ಎಂಬುದನ್ನು ರಾಜಕಾರಣಿಗಳು ಅರಿತುಕೊಳ್ಳಲಿ.
ಶಿವಕುಮಾರ, ತುಂಬಸೋಗೆ, ಎಚ್‌.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

3 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

8 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

8 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

8 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

8 hours ago