Andolana originals

ಓದುಗರ ಪತ್ರ: ರಾಜಕೀಯ ಬಿಟ್ಟು ದಸರಾ ಬಗ್ಗೆ ಮಾತನಾಡಿ

ಮೈಸೂರು ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಜನರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಡೀ ನಾಡೇ ನವರಾತ್ರಿಯ ಸಂಭ್ರಮದಲ್ಲಿ ಮುಳುಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಮುಡಾ ಪ್ರಕರಣ ಸಂಚಲನ ಸೃಷ್ಟಿಸಿದ್ದು, ರಾಜ್ಯದ ಮುಖ್ಯಮಂತ್ರಿಯೇ ಆರೋಪಿ ಸ್ಥಾನದಲ್ಲಿ ನಿಂತಿರುವುದು ಬೇಸರದ ಸಂಗತಿ. ಈಗ ಮೈಸೂರಿನಲ್ಲಿ ಎಲ್ಲಿ ನೋಡಿದರೂ ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಿವೆ. ಕಾರ್ಯಕ್ರಮಗಳ ಉದ್ಘಾಟನಾ ವೇದಿಕೆಗಳು ಜನಪ್ರತಿನಿಧಿಗಳಿಂದ ತುಂಬಿರುತ್ತವೆ. ಈ ವೇಳೆ ಜನಪ್ರತಿನಿಧಿಗಳು ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಸಾಹಿತ್ಯದ ಬಗ್ಗೆ ಮಾತನಾಡಬೇಕು, ಆದರೆ ಮೊನ್ನೆ ಚಾಮುಂಡಿಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜಾ.ದಳ ಶಾಸಕ ಜಿ.ಟಿ.ದೇವೇಗೌಡ ದಸರಾ ಕುರಿತು ಮಾತನಾಡುವ ಬದಲಿಗೆ ಮುಡಾ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಸಾರ್ವಜನಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿಸಿಕೊಳ್ಳುವುದು ಎಷ್ಟು ಸರಿ? ಸರ್ಕಾರಿ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ಇಲ್ಲಿ ರಾಜಕಾರಣಿಗಳು ಕಾರ್ಯಕ್ರಮದ ಬಗ್ಗೆ ಮಾತ್ರ ಮಾತನಾಡಬೇಕು. ಮುಂದಾದರೂ ಯಾವ ವೇದಿಕೆಯಲ್ಲಿ ಯಾವ ವಿಚಾರ ಮಾತನಾಡಬೇಕು ಎಂಬುದನ್ನು ರಾಜಕಾರಣಿಗಳು ಅರಿತುಕೊಳ್ಳಲಿ.
ಶಿವಕುಮಾರ, ತುಂಬಸೋಗೆ, ಎಚ್‌.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

50 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago