Mysore
25
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ ವಿಧಿಸುವ ಹಾಗೂ ಮೂಢ ನಂಬಿಕೆಯ ಆಚರಣೆ ಹೆಸರಿನಲ್ಲಿ ಸಾಮಾಜಿಕವಾಗಿ ಬಹಿಷ್ಕಾರ ಹಾಕುವ ಪ್ರಕರಣಗಳು ಸಾಬೀತಾದರೆ ಅಂತಹ ವ್ಯಕ್ತಿಗಳಿಗೆ ಮೂರು ವರ್ಷಗಳ ಕಾಲ ಜೈಲು ಮತ್ತು ಒಂದು ಲಕ್ಷ ರೂ. ದಂಡ ವಿಧಿಸುವ ಕಾನೂನನ್ನು ರೂಪಿಸಿದ್ದು, ಈ ವಿಧೇಯಕಗಳನ್ನು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾಪಂಚ್‌ ಕಾರ್ಟೂನ್‌

ರಾಜ್ಯ ಸರ್ಕಾರ ಇಂತಹ ಕಠಿಣ ಕಾನೂನು ತರಲು ನಿರ್ಧರಿಸಿರುವುದು ಒಂದು ದಿಟ್ಟ ಕ್ರಮ ಎಂದೇ ಹೇಳಬೇಕು. ಈ ಕಾನೂನು ಆದಷ್ಟೂ ಬೇಗ ಜಾರಿಗೆ ಬಂದು, ದ್ವೇಷ ಭಾಷಣ ಮಾಡುವವರಿಗೆ ಶಿಕ್ಷೆಯಾಗಿ ಸಾಮಾಜಿಕ ಸ್ವಾಸ್ಥ್ಯ ಶಾಶ್ವತವಾಗಿ ಉಳಿಯುವಂತಾಗಲಿ.ದ್ವೇಷ ಭಾಷಣವನ್ನೇ ಕಾಯಕ ವಾಗಿಸಿಕೊಂಡವರಿಗೆ ಒಂದು ಪಾಠವಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

Tags:
error: Content is protected !!