Andolana originals

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ ವಿಧಿಸುವ ಹಾಗೂ ಮೂಢ ನಂಬಿಕೆಯ ಆಚರಣೆ ಹೆಸರಿನಲ್ಲಿ ಸಾಮಾಜಿಕವಾಗಿ ಬಹಿಷ್ಕಾರ ಹಾಕುವ ಪ್ರಕರಣಗಳು ಸಾಬೀತಾದರೆ ಅಂತಹ ವ್ಯಕ್ತಿಗಳಿಗೆ ಮೂರು ವರ್ಷಗಳ ಕಾಲ ಜೈಲು ಮತ್ತು ಒಂದು ಲಕ್ಷ ರೂ. ದಂಡ ವಿಧಿಸುವ ಕಾನೂನನ್ನು ರೂಪಿಸಿದ್ದು, ಈ ವಿಧೇಯಕಗಳನ್ನು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾಪಂಚ್‌ ಕಾರ್ಟೂನ್‌

ರಾಜ್ಯ ಸರ್ಕಾರ ಇಂತಹ ಕಠಿಣ ಕಾನೂನು ತರಲು ನಿರ್ಧರಿಸಿರುವುದು ಒಂದು ದಿಟ್ಟ ಕ್ರಮ ಎಂದೇ ಹೇಳಬೇಕು. ಈ ಕಾನೂನು ಆದಷ್ಟೂ ಬೇಗ ಜಾರಿಗೆ ಬಂದು, ದ್ವೇಷ ಭಾಷಣ ಮಾಡುವವರಿಗೆ ಶಿಕ್ಷೆಯಾಗಿ ಸಾಮಾಜಿಕ ಸ್ವಾಸ್ಥ್ಯ ಶಾಶ್ವತವಾಗಿ ಉಳಿಯುವಂತಾಗಲಿ.ದ್ವೇಷ ಭಾಷಣವನ್ನೇ ಕಾಯಕ ವಾಗಿಸಿಕೊಂಡವರಿಗೆ ಒಂದು ಪಾಠವಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

40 mins ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago