ಓದುಗರ ಪತ್ರ
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಮೀಸಲಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಶಾಸನಸಭೆಗಳ ಕಾರ್ಯ ವೈಖರಿ ಜನರ ನಿರೀಕ್ಷೆಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿ ಸಾಗುತ್ತಿರುವುದು ಬೇಸರದ ಸಂಗತಿಯಾಗಿದೆ.
ಎಲ್ಲ ರಾಜಕೀಯ ಪಕ್ಷಗಳ ಸದಸ್ಯರು ಅಭಿವೃದ್ಧಿ, ಆಡಳಿತ, ಉದ್ಯೋಗ, ಆರೋಗ್ಯ, ಶಿಕ್ಷಣ, ರೈತರ ಸಮಸ್ಯೆಗಳು, ಬಡತನ ನಿವಾರಣೆ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕಾದ ಸಮಯದಲ್ಲಿ, ವೈಯಕ್ತಿಕ ವ್ಯಕ್ತಿಗಳ ವಿರುದ್ಧದ ಆರೋಪಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಭ್ರಷ್ಟಾಚಾರ ಆರೋಪಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸದನಗಳು ಜನಸೇವೆಯ ಕೇಂದ್ರಗಳಾಗುವ ಬದಲು ಆರೋಪ- ಪ್ರತ್ಯಾರೋಪಗಳ ವೇದಿಕೆಯಾಗಿವೆ. ಭ್ರಷ್ಟಾಚಾರ ಕುರಿತ ಚರ್ಚೆಗಳು ಅಗತ್ಯವಾದರೂ ಅದಕ್ಕೆ ಪ್ರಾಮುಖ್ಯತೆ ನೀಡಿ ಸದನದ ಸಮಯವನ್ನು ವ್ಯರ್ಥ ಮಾಡುವುದು, ಸದನವನ್ನು ಬಹಿಷ್ಕಾರ ಮಾಡುವುದು ಅಥವಾ ಮುಂದೂಡುತ್ತಲೇ ಇದ್ದರೆ ಜನತೆಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ವೈಯಕ್ತಿಕ ದ್ವೇಷ, ರಾಜಕೀಯ ಪ್ರತಿಷ್ಠೆ, ಅಸಭ್ಯ ವರ್ತನೆ, ಹಾಗೂ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡುವುದರಿಂದ ಶಾಸನಸಭೆಗಳ ಗೌರವ ಮತ್ತು ಪ್ರಾಮುಖ್ಯತೆ ಕುಸಿಯುತ್ತಿದ್ದು, ಸಾರ್ವಜನಿಕ ಹಣ ಹಾಗೂ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತಿದೆ. ಎಲ್ಲಾ ಜನಪ್ರತಿನಿಽಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸದನದ ಗೌರವವನ್ನು ಕಾಪಾಡುವುದು ಅಗತ್ಯ.
– ವಿನೋದ್ ಶಂಕರ್, ಮೈಸೂರು
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…
ಮೈಸೂರು: ಸಾವಿರಾರು ಕಿ.ಮೀ. ದೂರದಿಂದ ವಲಸೆ ಬರುವ ಹಕ್ಕಿಗಳಿಗೆ ಅದರಲ್ಲೂ ವಿಶೇಷವಾಗಿ ಮಂಗೋಲಿಯಾದಿಂದ ಸಾವಿರಾರು ಕಿಲೋಮೀಟರ್ ದೂರ ವಲಸೆ ಬರುವ…